ಗೋವಾ : ಗೋವಾದಲ್ಲಿ ಇನ್ಮುಂದೆ ಕನ್ನಡಿಗರು ವಾಹನ ಖರೀದಿಸುವಂತಿಲ್ಲ ಎಂಬ ಹೊಸ ಕಾನೂನು ಜಾರಿಗೆ ತರಲು ಗೋವಾ ಸರ್ಕಾರ ನಿರ್ಧರಿಸಿದೆ.
ಹೌದು. ಕರ್ನಾಟಕ ಸೇರಿದಂತೆ ಇತರ ರಾಜ್ಯದವರು ವಾಹನ ಖರೀದಿಸಲು ಮತ್ತು ಅವುಗಳನ್ನ ನೋಂಡಣಿ ಮಾಡಿಸಲು ಪರವಾನಗಿ ನೀಡದಂತೆ ನಿರ್ಬಂಧ ಹೇರುವ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಗೋವಾದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಗೋವಾದವರಿಗೆ ಉದ್ಯೋಗ ಉಳಿಸಲು ಹಲವು ರೀತಿಯ ಪ್ರಯತ್ನ ನಡೆದಿದೆ. ಗೋವಾದಲ್ಲಿ ಹಲವು ಉದ್ಯೋಗಗಳು ಕನ್ನಡಿಗರ ಪಾಲಾಗಿದೆ.
ಕ್ಯಾಬ್, ಟ್ಯಾಕ್ಸಿಯನ್ನ ಕನ್ನಡಿಗರೇ ಹೆಚ್ಚು ಓಡಿಸುತ್ತಿದ್ದಾರೆ. ಎಲ್ಲಾ ಉದ್ಯಮದಲ್ಲೂ ಕನ್ನಡಿಗರೇ ಮುಂದಿದ್ದಾರೆ. ಇದನ್ನು ತಪ್ಪಿಸಲು ಗೋವಾ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಗೋವಾ ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆದಿದೆ.
ಗೋವಾದಲ್ಲಿ ಕನ್ನಡಿಗ ಲಾರಿ ಚಾಲಕನ ಮೇಲೆ ಹಲ್ಲೆ
ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮುಂದುವರೆದಿದ್ದು, ಕರ್ನಾಟಕದವರು ಮತ್ತು ಕನ್ನಡಿಗರನ್ನು ಟಾರ್ಗೆಟ್ ಮಾಡಿ ಹಲ್ಲೆ ಮಾಡಿರುವ ಆರೋಪ ಇದೀಗ ಕೇಳಿ ಬಂದಿದೆ. ಕನ್ನಡಿಗ ಲಾರಿ ಚಾಲಕ ಅನಿಲ್ ರಾಠೋಡ್ ಎನ್ನುವವರ ಮೇಲೆ ಗೋವಾದಲ್ಲಿ ಹಲ್ಲೆ ನಡೆಸಲಾಗಿದೆ.
ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ನಿವಾಸಿಯಾಗಿರುವ ಅನಿಲ್ ರಾಠೋಡ್ ಗೋವಾದ ಪ್ರೆಡ್ನೆ ಬಳಿಯ ರಸ್ತೆಯಲ್ಲಿ ಅನೀಲ್ ಟ್ರಕ್ ಅಡ್ಡಗಟಿ ಗೂಂಡಾಗಿರಿ ನಡೆಸಲಾಗಿದೆ. ಕಾರು ಜೀಪ್ನಲ್ಲಿ ಬಂದಿದ್ದ ದುಷ್ಕರ್ಮಿಗಳ ಗ್ಯಾಂಗ್ ಅನಿಲ್ ರಾಠೋಡ್ ಮೇಲೆ ಹಲ್ಲೆ ಮಾಡಿದೆ. ಕನ್ನಡಿಗ ಚಾಲಕ ಅನಿಲ್ ಗೆ ನಿಂದಿಸಿದ್ದು ಅಲ್ಲದೆ ಹಲ್ಲೆ ನಡೆಸಿದ್ದಾರೆ. ಅನಿಲ್ ಮಹಾರಾಷ್ಟ್ರದಿಂದ ಗೋವಾಕ್ಕೆ ಕಲ್ಲು ಸಾಗಿಸುತ್ತಿದ್ದರು.
ಈ ವೇಳೆ ಚಾಲಕ ಅನಿಲ್ ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ದೃಶ್ಯವನ್ನು ಅನಿಲ್ ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗೋವಾ ಪೊಲೀಸರ ವಿರುದ್ಧ ಚಾಲಕ ಅನಿಲ್ ಆರೋಪಿಸಿದ್ದಾರೆ. ಗೋವಾದಲ್ಲಿ ಕನ್ನಡಿಗರ ಮೇಲೆ ನಿರಂತರ ಹಲ್ಲೆ ದೌರ್ಜನ್ಯ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ನೆರವಿಗೆ ಬರುವಂತೆ ಚಾಲಕ ಅನಿಲ್ ಮನವಿ ಮಾಡಿದ್ದಾರೆ ಗೋವಾ ಸಿಎಂ ಜೊತೆಗೆ ಮಾತನಾಡಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.