* ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ಸುರೇಶ್ ಕುಮಾರ್
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ತೀರ್ಮಾನ ಕೈಗೊಂಡಿದೆ.
ಜಾತಿ ಗಣತಿಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ , ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಇನ್ನೂ ಇದೇ ವೇಳೆ ನ್ಯಾಯಪೀಠ ಯಾವುದೇ ಕಾರಣಕ್ಕೂ ನೀವು ಸಾರ್ವಜನಿಕರಿಗೆ ಒತ್ತಡ ಹಾಕುವ ಹಾಗೇ ಇಲ್ಲ, ಈ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ದತ್ತಾಂಶ ಸರ್ಕಾರ ಹೊರತು ಪಡಿಸಿ ಬೇರೆ ಯಾರಿಗೂ ಕೂಡ ಲಭ್ಯವಾಗಬಾರದು.
ಗುರುವಾರ ತಡೆಯಾಜ್ಞೆ ನೀಡಲು ನಿರಾಕರಿಸಿದ ಕೋರ್ಟ್, ಲಿಖಿತ ವಾದಾಂಶ ಸಲ್ಲಿಕೆಗೆ ಸೂಚಿಸಿ ವಿಚಾರಣೆಯನ್ನು ಇಂದು ಮುಂದೂಡಿತು.
ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. 5 ನಿಮಿಷವಾದ ಮಂಡಿಸಲು ಅವಕಾಶ ನೀಡುವಂತೆ ಕೋರ್ಟಿಗೆ ಮನವಿ ಮಾಡಿದರು. ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧರಿಸಿ ವಾದ ಮಂಡನೆ ಮಾಡಿದರು. ಶೀಘ್ರವಾದ ಮಂಡನೆ ಪೂರ್ಣಗೊಳಿಸಲು ಇದೆ ವೇಳೆ ಕೋರ್ಟ್ ಸೂಚನೆ ನೀಡಿತು. ಒಂದು ಪತ್ರ ಬಂದಿದೆ ಅದನ್ನು ನಿಮಗೆ ನೀಡುತ್ತೇನೆ ಎಂದು ಜಡ್ಜ್ ಗೆ ರವಿವರ್ಮಕುಮಾರ್ ಪತ್ರ ನೀಡಿದರು.
ಆಯೋಗದ ಸರ್ವೆಯ ವಿಧಾನವನ್ನು ಮರು ಪರಿಶೀಲಿಸಿದ್ದೇವೆ . ಸರ್ವೆ ವೇಳೆ ಮಾಹಿತಿ ನೀಡುವ ಬಲವಂತವಿಲ್ಲ. ಮನೆ ಬೀಗ ಹಾಕಿದ್ದರೆ, ಮನೆಯಲ್ಲಿ ಯಾರೂ ಇಲ್ಲದಿದ್ದರೆ, ಕುಟುಂಬದವರು ಸರ್ವೆಯಲ್ಲಿ ಭಾಗವಹಿಸಲು ಬಯಸಿದಿದ್ದರೆ, ಹೀಗೆ ಸರ್ವೇ ಮಾಡುವವರಿಗೆ ಆಯ್ಕೆಗಳನ್ನ ನೀಡಲಾಗಿದೆ ಮಾಹಿತಿ ನೀಡುವುದಿಲ್ಲ ವೆಂದು ಜನರು ಹೇಳಲು ಅವಕಾಶವಿದೆ ಎಂದು ರವಿವರ್ಮಕುಮಾರ್ ವಾದಿಸಿದರು.
ಆಯೋಗದ ವಾದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ವಕೀಲ ಪ್ರಭುಲಿಂಗ ನವರಿಗೆ ವಾದ ಆರಂಭಿಸಿದರು. ಸರ್ವೆಯಲ್ಲಿ ಭಾಗವಹಿಸಬೇಕಿದ್ದರೆ, ಕೇಂದ್ರ ರಾಜ್ಯ ಸರ್ಕಾರ ಪ್ರತ್ಯೇಕ ಗಣತಿ ಮಾಡುತ್ತಿದ್ದಾರೆ. ಸರ್ವೆ ಹೆಸರಿನಲ್ಲಿ ಜನಗಣತಿ ಮಾಡುತ್ತಿದ್ದಾರೆ ಎಂದು ವಾದಿಸಿದರು. ಈ ವೇಳೆ ಹೈಕೋರ್ಟ್ ಆಧಾರ್ ನಲ್ಲಿನ ದತ್ತಾಂಶ ಪಡೆಯುತ್ತಿಲ್ಲ. ಕೇವಲ ಗುರುತಿಗಷ್ಟೇ ಪಡೆಯುತ್ತೇವೆ ಎಂದು ಸರ್ಕಾರ ಹೇಳಿದೆ.
ಈ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ವಕೀಲ ವಿವೇಕ್ ರೆಡ್ಡಿ ವಾದ ಆರಂಭಿಸಿದರು. ಸರ್ಕಾರದ ನಿಲುವಿನಲ್ಲಿ ಅಲ್ಪ ಬದಲಾವಣೆಯಿಂದ ಪ್ರಯೋಜನವಿಲ್ಲ. ಸಂಗ್ರಹ ಮಾಡುವಾಗ ದತ್ತಾಂಶ ಸೋರಿಕೆ ಆಗುವ ಸಾಧ್ಯತೆ ಇದೆ. ದತ್ತಾಂಶಕ್ಕೆ ಯಾವ ಕಾನೂನಿನ ರಕ್ಷಣೆ ಇದೆ ಎಂಬುವುದು ಸ್ಪಷ್ಟವಿಲ್ಲ. ಆಧಾರ್ಗೆ ಕಾಯ್ದೆಯ ರಕ್ಷಣೆ ಇದೆ ಆದರೆ ಇಲ್ಲಿಲ್ಲ. ಆಧಾರಿಗಿಂತ ಹೆಚ್ಚಿನ ವಿವರವನ್ನು ಇಲ್ಲಿ ನೀಡುತ್ತಿದ್ದೇವೆ. ಹಣ ಆಸ್ತಿ ಜಾತಿ ಎಲ್ಲದರ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಆದರೆ ಆಧಾರ್ ಕಾರ್ಡ್ ಕಾಯ್ದೆಗೆ ಇರುವ ರಕ್ಷಣೆ ಜಾತಿ ಸರ್ವೆಗೆ ಇಲ್ಲ. ಇಲ್ಲಿ ಖಾಸಗಿತನದ ಹಕ್ಕಿನ ರಕ್ಷಣೆಯ ಪ್ರಶ್ನೆ ಇದೆ ಎಂದು ವಿವೇಕ್ ರೆಡ್ಡಿ ವಾದಿಸಿದರು.
ಇದೆ ವೇಳೆ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಕೂಡ ವಾದಿಸಿದರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಮಾಹಿತಿ ರಕ್ಷಣೆ ಕಡ್ಡಾಯವಾಗಿದೆ ಸೂಕ್ಷ್ಮ ಮತ್ತು ವೈಯಕ್ತಿಕ ದತ್ತಾಂಶ ರಕ್ಷಣೆಗೆ ನೀತಿರೂಪಿಸಬೇಕು. ಸಮೀಕ್ಷೆ ವೇಳೆ ಸಂಗ್ರಹಿಸಿದ ತಂಶ ಎಲ್ಲಿ ಸಂಗ್ರಹಿಸುತ್ತಾರೆ? ಹ್ಯಾಕಿಂಗ್ ನಿಂದ ದತ್ತಾಂಶ ರಕ್ಷಣೆಗೆ ಯಾವ ಕ್ರಮ ಕೈಗೊಂಡಿದ್ದಾರೆ? ಯಾವುದರ ಮಾಹಿತಿಯನ್ನು ಕೂಡ ರಾಜ್ಯ ಸರ್ಕಾರ ನೀಡಿಲ್ಲ ಎಂದು ವಾದಿಸಿದರು.
ಷರತ್ತುಗಳೇನು?
1) ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು.
2) ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.
3) ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.
4) ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
5) ಮಾಹಿತಿ ನೀಡುವಂತೆ ಜನರಿಗೆ ಯಾವುದೇ ಒತ್ತಡ ಹಾಕಬಾರದು.