ಬೆಂಗಳೂರು : ಇದೇ ಮೊದಲ ಬಾರಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಆಯೋಜಿಸಿರುವ ಕಾವೇರಿ ಆರತಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಮಾ.21 ರಂದಯ ಹಮ್ಮಿಕೊಂಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದೆ. ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಗೆ ತಡೆ ನೀಡಲು ನಿರಾಕರಿಸಿದೆ.
ಇನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮಾರ್ಚ್ 21ರಂದು ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡಿಗರ ಜೀವ ನದಿಯಾಗಿರುವ ಕಾವೇರಿ ಮಾತೆಗೆ ಗೌರವ ಸಲ್ಲಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ಬನ್ನಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.