ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿಯ ದಂದೆಯ ಕಿಂಗ್ ಪಿನ್ ಅನ್ನು ಕೊಲೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಿನ್ನೆ ರಾತ್ರಿ ಒಂದು ಕೊಲೆ ನಡೆದಿದೆ. ಹೋಟೆಲ್ನಲ್ಲಿ ಬಡ್ಡಿ ದಂಧೆಕೋರ ಕಿಂಗ್ ಪಿನ್ ನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಎಂ ಎನ್ ಡಿ ಅಲಿಯಾಸ್ ಜಮೀರ್ ಅಹ್ಮದ್ ದರ್ಗಾ ವಾಲೆಯನ್ನು ಹತ್ಯೆಗೆದಿದ್ದಾರೆ. ಮೀಟರ್ ಬಡ್ಡಿ ದಂಧೆಯ ಕಿಂಗ್ ಪಿನ್ ಆಗಿದ್ದ ಜಮೀರ್ ದರ್ಗಾವಾಲೆಯನ್ನು ಒಂದು ವರ್ಷದ ಹಿಂದೆ ಕಿಡ್ನಾಪ್ ಮಾಡಲಾಗಿತ್ತು. ಜಮೀರ್ ಅಹ್ಮದ್ ದರ್ಗಾವಾಲೆಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ನಿನ್ನೆ ರಾತ್ರಿ 11:00 ಹೋಟೆಲ್ಗೆ ಊಟಕ್ಕೆ ಎಂದು ಜಮೀರ್ ಬಂದಿದ್ದಾಗ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ದೀಪನ್ ಭೇಟಿ ನೀಡಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








