ಬಳ್ಳಾರಿ : ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್ ಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕೆಎಂಎಫ್ ಘಟಕದ ಮುಂದೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರಹಾಕಿದ್ದಾರೆ.
ಈ ಹಿಂದೆ ನಷ್ಟದ ಮಾಹಿತಿ ನೀಡಿ ಅಧಿಕಾರಿಗಳು ಹಣ ಕಡಿತ ಮಾಡಿದ್ದರು. ಪ್ರತಿ ಲೀಟರ್ಗೆ 1 ರೂಪಾಯಿ 50 ಪೈಸೆ ಕಡಿತ ಮಾಡಿದ್ದ ರಾಬಕೋವಿ ಒಕ್ಕೂಟ. ಹಾಗಾಗಿ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮುತ್ತಿಗೆ ಹಾಕಲಾಗಿದೆ.