ಬೆಂಗಳೂರು : ಕೆಆರ್ ಎಸ್ ಡ್ಯಾಂ ಕಟ್ಟಿದ್ದು ಟಿಪ್ಪು ಸುಲ್ತಾನ್ ಎಂದು ನಾನು ಹೇಳಿಲ್ಲ. ಟಿಪ್ಪುವಿಗೂ ಡ್ಯಾಂ ಕಟ್ಟುವ ಕನಸಿತ್ತು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಕೆಆರ್ ಎಸ್ ಡ್ಯಾಂ ಕಟ್ಟಿದ್ದು ಟಿಪ್ಪು ಸುಲ್ತಾನ್ ಎಂದು ನಾನು ಹೇಳಿಲ್ಲ. ಟಿಪ್ಪುವಿಗೂ ಡ್ಯಾಂ ಕಟ್ಟುವ ಕನಸಿತ್ತು, ಡ್ಯಾಂ ಬಳಿಯಿರುವ ಶಿಲಾ ಶಾಸನದಲ್ಲಿ ಇದರ ಬಗ್ಗೆ ಉಲ್ಲೇಖವಿದೆ. ಕಾವೇರಿ ನದಿಗೆ ಡ್ಯಾಂ ಕಟ್ಟಬೇಕು ಎನ್ನುವ ಪ್ರಸ್ತಾಪ ಇದೆ. ಅದನ್ನೂ ಕೂಡ ಕೆಆರ್ ಎಸ್ ನಲ್ಲಿಯೇ ಇಡಲಾಗಿದೆ. ಡ್ಯಾಂ ಕಟ್ಟಿದ್ದು ನಾಲ್ವಡಿ ಕೃಷ್ಣರಾಜ್ ಒಡೆಯರ್, ನಾನು ಶಿಲಾ ಶಾಸನದ ಬಗ್ಗೆ ಮಾತ್ರ ಹೇಳಿದ್ದೇನೆ ಎಂದು ಹೇಳಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯ ಸ್ಮರಣೆ ದಿನದಂದೇ ವಿವಾದಾತ್ಮಕ ಹೇಳಿಕೆ ನೀಡಿದ್ದರು.