ಶಿವಮೊಗ್ಗ : ಎದುರಿಗೆ ಬಂದಂತಹ ಬೈಕ್ ಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು 40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಮಗೋಡು ಎಂಬಲ್ಲಿ ನಡೆದಿದೆ.

ಹೌದು ಬೆಂಗಳೂರಿನಿಂದ ಹೊಸನಗರ ಮಾರ್ಗವಾಗಿ ಭಟ್ಕಳಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದಂತ ಬೈಕ್ ಗೆ ಸೈಡ್ ಕೊಡಲು ಹೋಗಿ 40 ಅಡಿ ಆಳದ ಕಂದಕಕ್ಕೆ ಕೆಎಸ್ಆರ್ಟಿಸಿ ಬಸ್ ಉರುಳಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಬಳಿ ಈ ಒಂದು ದುರಂತ ಸಂಭವಿಸಿದೆ. ಎದುರಿಗೆ ಬಂದ ವಾಹನಕ್ಕೆ ಸೈಡ್ ಕೊಡುವಾಗ ಕಂದಕಕ್ಕೆ ಬಸ್ ಉರುಳಿದೆ. ಸುಮಾರು 40 ಅಡಿ ಆಳದಲ್ಲಿ ಮರಕ್ಕೆ ಸಿಲುಕಿ ತಲೆ ಕೆಳಗಾಗಿ ಬಸ್ ನಿಂತಿದೆ.

ಮರ ತಡೆಯದಿದ್ದರೆ ಇನ್ನೂ 100 ಅಡಿ ಆಳದ ಒಳಗೆ ಬೀಳುತ್ತಿತ್ತು ಎನ್ನಲಾಗುತ್ತಿದೆ ಬಸ್ನಲ್ಲಿ ಮಹಿಳೆಯರು ಮಕ್ಕಳು ಸೇರಿ, 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಬೆಂಗಳೂರಿನಿಂದ ಹೊಸನಗರ ಮಾರ್ಗವಾಗಿ ಬಸ್ ಭಟ್ಕಳಕ್ಕೆ ತೆರಳುತ್ತಿತ್ತು.ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಪ್ರಯಾಣಿಕರ ಸಹಾಯಕ್ಕೆ ಧಾವಿಸಿದ್ದಾರೆ.

Share.
Exit mobile version