ಬೆಳಗಾವಿ : ಬೆಳಗಾವಿಯಲ್ಲಿ ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್ ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ಡ್ಯೂಟಿ ಬದಲಿಸಿದ್ದಕ್ಕೆ ಬಸ್ ಒಳಗೆ ನೇಣು ಬಿಗಿದುಕೊಂಡು ನೌಕರ ಕೇಶವ ಕಮಡೋಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇಶವ ಅವರು ಬೆಳಗಾವಿಯ ಹಳೆ ಗಾಂಧಿನಗರ ನಿವಾಸಿಯಾಗಿದ್ದು, ಬಸ್ ವಾಷಿಂಗ್ ಬದಲು ಪಂಕ್ಚರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದರು ಎಂದು ಅಧಿಕಾರಿಗಳ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.