Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಈ ಬಣ್ಣದ ಬೆಲ್ಲ ತಿನ್ನಬೇಡಿ, ಇದು ವಿಷಕ್ಕೆ ಸಮ.!

18/12/2025 8:11 AM

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಎದೆಗುಂದಬೇಡಿ, ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ!

18/12/2025 8:02 AM

BREAKING: ನಾಸಾದ 15ನೇ ಮುಖ್ಯಸ್ಥರಾಗಿ ಖಾಸಗಿ ಅಸ್ಟ್ರೋನಾಟ್ ಜೇರೆಡ್ ಐಸಾಕ್‌ಮನ್ ನೇಮಕ | NASA

18/12/2025 8:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಸಿಡಿಲು ಬಡಿದು ಘೋರ ದುರಂತ : ಬಾಲಕ ಸೇರಿ ಮೂವರು ಸಾವು.!
KARNATAKA

BREAKING : ರಾಜ್ಯದಲ್ಲಿ ಸಿಡಿಲು ಬಡಿದು ಘೋರ ದುರಂತ : ಬಾಲಕ ಸೇರಿ ಮೂವರು ಸಾವು.!

By kannadanewsnow5711/04/2025 8:42 AM

ಕೊಪ್ಪಳ : ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕೊಪ್ಪಳದ ತೋಟದ ಮನೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪ್ಪಳದ ಚುಕ್ಕನಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ (48) ಹಾಗೂ ಗೋವಿಂದಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗೆ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಸಿಡಿಲು ಬಡಿದು 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಂಡೆಬಸಾಪುರ ತಾಂಡಾದ ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ತಾಂಡಾದ ಪಾಂಡುನಾಯಕ(14) ಎಂದು ಗುರುತಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು:

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.

ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು.

BREAKING: Lightning strikes in the state causing a terrible tragedy: Three people die! including a boy
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಈ ಬಣ್ಣದ ಬೆಲ್ಲ ತಿನ್ನಬೇಡಿ, ಇದು ವಿಷಕ್ಕೆ ಸಮ.!

18/12/2025 8:11 AM2 Mins Read

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಎದೆಗುಂದಬೇಡಿ, ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ!

18/12/2025 8:02 AM2 Mins Read

BIG NEWS : ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳ ಹೆಸರಿನಲ್ಲಿ 10 ಲಕ್ಷ ರೂ. ಠೇವಣಿ  : ವಿಧಾನಪರಿಷತ್ ನಲ್ಲಿ ಕೇಳಿಬಂತು ಪ್ರಸ್ತಾಪ.!

18/12/2025 7:50 AM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ಈ ಬಣ್ಣದ ಬೆಲ್ಲ ತಿನ್ನಬೇಡಿ, ಇದು ವಿಷಕ್ಕೆ ಸಮ.!

18/12/2025 8:11 AM

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಎದೆಗುಂದಬೇಡಿ, ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ!

18/12/2025 8:02 AM

BREAKING: ನಾಸಾದ 15ನೇ ಮುಖ್ಯಸ್ಥರಾಗಿ ಖಾಸಗಿ ಅಸ್ಟ್ರೋನಾಟ್ ಜೇರೆಡ್ ಐಸಾಕ್‌ಮನ್ ನೇಮಕ | NASA

18/12/2025 8:01 AM

BIG NEWS : ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳ ಹೆಸರಿನಲ್ಲಿ 10 ಲಕ್ಷ ರೂ. ಠೇವಣಿ  : ವಿಧಾನಪರಿಷತ್ ನಲ್ಲಿ ಕೇಳಿಬಂತು ಪ್ರಸ್ತಾಪ.!

18/12/2025 7:50 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಈ ಬಣ್ಣದ ಬೆಲ್ಲ ತಿನ್ನಬೇಡಿ, ಇದು ವಿಷಕ್ಕೆ ಸಮ.!

By kannadanewsnow5718/12/2025 8:11 AM KARNATAKA 2 Mins Read

ನೀವು ಖರೀದಿಸುವ ಬೆಲ್ಲವು ಬಣ್ಣಬಣ್ಣದ್ದಾಗಿದೆಯೇ? ಅಥವಾ ಆಕರ್ಷಕವಾದ ತಿಳಿ ಹಳದಿ ಬಣ್ಣದ್ದಾಗಿದೆಯೇ? ಬೆಲ್ಲದ ಬಣ್ಣ ವ್ಯತ್ಯಾಸದ ಹಿಂದಿನ ರಹಸ್ಯ ಮತ್ತು…

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಎದೆಗುಂದಬೇಡಿ, ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ!

18/12/2025 8:02 AM

BIG NEWS : ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳ ಹೆಸರಿನಲ್ಲಿ 10 ಲಕ್ಷ ರೂ. ಠೇವಣಿ  : ವಿಧಾನಪರಿಷತ್ ನಲ್ಲಿ ಕೇಳಿಬಂತು ಪ್ರಸ್ತಾಪ.!

18/12/2025 7:50 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 1600 `PSI’ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

18/12/2025 7:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.