ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಹೌದು ರಸ್ತೆಯಲ್ಲಿ ತೆರಳುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಸವರ್ಣೀಯರು ಅಡ್ಡಗಟ್ಟಿ ಜಾತಿನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುವಾಗ ಕಾನೂನು ವಿದ್ಯಾರ್ಥಿಯಾದ ದುರ್ಗಪ್ಪನನ್ನು ತಡೆದು ಜಾತಿನಿಂದನೆ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ದಾರಿಯಲ್ಲಿ ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ.
ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿಯಿಂದ ಈ ಒಂದು ಕೃತ್ಯ ನಡೆದಿದೆ. ಜಾತಿ ನಿಂದನೆ ಮಾಡಿದ್ದು ಅಲ್ಲದೆ ದುರ್ಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ ಈ ಕುರಿತಂತೆ, SC, ST ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಜಾತಿ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.