ಕಲಬುರ್ಗಿ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಲಡ್ಲಾಪುರ ಮಧ್ಯೆ ನಡೆದಿರುವಂತಹ ಘಟನೆಯಾಗಿದೆ.
ಈ ಒಂದು ಅಪಘಾತದಲ್ಲಿ ಸೂರ್ಯಕಾಂತ್ ಮುಂಡರಗಿ ಎನ್ನುವ ವ್ಯಕ್ತಿ ಮರಣ ಹೊಂದಿದ್ದಾರೆ. ಲಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮವಾಗಿ, ಸ್ಥಳದಲ್ಲೇ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ಮುಂಚೆಯೇ ಅವರು ಸ್ಥಳದಲ್ಲಿ ಸಾವನಪ್ಪಿದ್ದಾರೆ.ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮೈಸೂರಿನ ಅರಣ್ಯ ಪ್ರದೇಶದಲ್ಲಿ ಬೆಂಕಿ
ಕೋಣನೂರು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಆವರಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಬೆಂಕಿಯಿಂದ ನೂರಾರು ಎಕರೆ ಪ್ರದೇಶದ ವನ ಸಂಪತ್ತು ನಾಶವಾಗಿದೆ ಬೆಂಕಿ ನಂದಿಸಲು ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.