ಬೆಂಗಳೂರು : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಸೂಕ್ತವಾದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರ ನೋಡಿದರು ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಜೆಡಿಎಸ್ ಮುಖಂಡ ಪ್ರದೀಪ್ ಎನ್ನುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಹೌದು ಸಚಿವ ಜಮೀರ್ ಅಹಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಜೆಡಿಎಸ್ ಕಾನೂನು ವಿಭಾಗದ ಪ್ರದೀಪ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು 831 ಕೋಟಿ ಅನುದಾನ ವಂಚಿಸಿದ ಬಗ್ಗೆ ರಾಜ್ಯಪಾಲರಿಗೆ ಪ್ರದೀಪ್ ದೂರು ನೀಡಿದ್ದಾರೆ. ಅಕ್ರಮದ ತನಿಖೆ ಮತ್ತು ಪ್ರಾಸಿಕ್ಯೂಷನ್ ತನಿಖೆಗೆ ಆದೇಶಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮುಖಂಡ ಪ್ರದೀಪ್ ನೀಡಿದ್ದಾರೆ ಎಂದು ತಿಳಿದುಬಂದಿದೆ.