ವಿಜಯನಗರ : ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಪತಿಯೊಬ್ಬ ಕೊಡಲಿಯಿಂದ ಯುವಕನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲುಗೋಡು ಗ್ರಾಮದಲ್ಲಿ ನಡೆದಿದೆ.
ಆನಂದೇವನಹಳ್ಳಿ ಬಸವರಾಜ್ (26) ಎಂಬಾತ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಇನ್ನು ಕೊಲೆ ಮಾಡಿದ ವ್ಯಕ್ತಿ ಚಿಲುಗೋಡು ಗ್ರಾಮದ ಬಸರಕೋಡು ಪಕ್ಕೀರಸ್ವಾಮಿ ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಬಸವರಾಜ್ ಅವರು ಪಕ್ಕೀರಸ್ವಾಮಿ ಅವರ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಮೂರು ತಿಂಗಳ ಹಿಂದೆ ಬಸವರಾಜ್ ಮತ್ತು ಫಕೀರಪ್ಪನ ಹೆಂಡತಿ ಓಡಿ ಹೋಗಿದ್ದರು. ಈ ಕುರಿತು ಫಕೀರಪ್ಪ ತಂಬ್ರಹಳ್ಳಿ ಠಾಣೆಗೆ ದೂರು ನೀಡಿದ್ದ. ಬಳಿಕ ಪೊಲೀಸರು ಇವರಿಬ್ಬರನ್ನು ಪತ್ತೆ ಹಚ್ಚಿ ರಾಜಿಪಂಚಾಯಿತಿ ಮೂಲಕ ಸಂಧಾನ ನಡೆಸಿದ್ದರು. ಅದಾದ ಬಳಿಕ ಬಸವರಾಜ್ ಇತ್ತೀಚಿಗೆ ಊರಿಗೆ ಬಂದಿದ್ದ. ಮತ್ತೆ ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಫಕೀರಪ್ಪ ಶಂಕೆ ವ್ಯಕ್ತಪಡಿಸಿದ್ದಾನೆ.
ಕೋಪದಲ್ಲಿ ಇಂದು ಹಗರಿಬೊಮ್ಮನಹಳ್ಳಿ ಮುಖ್ಯ ರಸ್ತೆಯ ಪಕ್ಕದ ವೀರ ಯೋಧ ಮೌನೇಶ್ ಪುತ್ಥಳಿ ಮುಂಭಾಗದಲ್ಲೇ ಹಾಡು ಹಗಲೇ ಕೊಡಲಿಯಿಂದ ತಲೆ ಮತ್ತು ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ 100 ಮೀಟರ್ ದೂರ ಓಡಿ ಹೋಗಿ ನಡುರಸ್ತೆಯಲ್ಲಿ ಕೊಡಲಿ ಬಿಟ್ಟು ತಂಬ್ರಹಳ್ಳಿ ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.