ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದಂತಹ ಅಗ್ನಿ ಅವಘಡ ಸಂಭವಿಸಿದ್ದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಎಂಬ ಕೈಗಾರಿಕಾ ಪ್ರದೇಶದಲ್ಲಿ ಸ್ಟೀಲ್ ಕಾರ್ಖಾನೆಯ ಪಕ್ಕದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
A1 ಸ್ಟೀಲ್ಕಾರ್ಖಾನೆ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತ್ಯಾಜ್ಯಕ್ಕೆ ಹೊತ್ತಿಕೊಂಡ ಬೆಂಕಿ ಕಾರ್ಖಾನೆಗೆ ಹಬ್ಬುವ ಸಾಧ್ಯತೆ ಇದೆ ಎನ್ನಲಾಗಿದೆ. ಗೌರಿಬಿದನೂರು ಕುಡುಮಲಕುಂಟೆ ಗ್ರಾಮದಲ್ಲಿ ಪ್ರಕರಣ ನಡೆದಿದೆ. A1 ಸ್ಟೀಲ್ ಕಾರ್ಖಾನೆಗೆ ಪಕ್ಕದಲ್ಲಿ ಈ ಒಂದು ಬೆಂಕಿ ಒಗಡ ಸಂಭವಿಸಿದೆ. ತ್ಯಾಜ್ಯಕ್ಕೆ ಹೊತ್ತಿಕೊಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸಪಡುತ್ತಿದ್ದಾರೆ