ಬೆಂಗಳೂರು : ಬೆಂಗಳೂರು ನಗರದಲ್ಲಿ ಪೌರ ಕಾರ್ಮಿಕರ ಮೇಲೆ ತಾಯಿ, ಮಗ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಎದುರು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸೆಪ್ಟೆಂಬರ್ 11 ರಂದು ಬೆಂಗಳೂರು ಪಶ್ಚಿಮ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಂದ್ರ ಎನ್ನುವವರು ಹಾಗೂ ಅವರ ತಾಯಿ ಮಗ ಸೇರಿ ಬಿಬಿಎಂಪಿಯ ಮಹಿಳಾ ಪೌರಕಾರ್ಮಿಕರ ಮೇಲೆ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆ. ಈ ವೇಳೆ ಪೌರಕಾರ್ಮಿಕರಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬರಾದ ಲಕ್ಷ್ಮಿ ಎಂಬುವವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಪೌರಕಾರ್ಮಿಕರ ಹಲ್ಲೆ ಖಂಡಿಸಿ ಬಿಬಿಎಂಪಿ ಮುಂಭಾಗ ಪೌರ ಕಾರ್ಮಿಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.