ಆನೇಕಲ್ : ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ ಸಚಿವ ರಾಮಲಿಂಗಾ ರೆಡ್ಡಿ 10 ನಿಮಿಷಗಳ ಕಾಲ ಲಿಫ್ಟ್ನಲ್ಲಿ ಸಿಲುಕಿದ ಘಟನೆ ಹೊಸೂರಿನಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆಯ ಉದ್ಘಾಟನೆಗೆ ತೆರಳಿದ್ದಾಗ ಘಟನೆ ನಡೆದಿದೆ. ಕರ್ನಾಟಕದ ಗಡಿ ಭಾಗದ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಲಿಫ್ಟ್ ಡೋರ್ ಓಪನ್ ಆಗದೇ ಅದರಲ್ಲೇ ಸಚಿವರು ಸಿಲುಕಿಕೊಂಡಿದ್ದಾರೆ. ನಂತರ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಲಾಗಿದೆ. ಸಚಿವರು ಸೇರಿ ಅವರೊಂದಿಗೆ ಇದ್ದವರು ಸುರಕ್ಷಿತರಾಗಿ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.
ಹೊಸೂರಿನ ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ ಘಟನೆ ನಡೆದಿದೆ. ನೆಲಮಹಡಿಯಿಂದ ಲಿಫ್ಟ್ನಲ್ಲಿ ಹೋಗುವ ವೇಳೆ ಸಚಿವ ರಾಮಲಿಂಗಾರೆಡ್ಡಿ, ಹೊಸೂರು ಶಾಸಕ ಪ್ರಕಾಶ್ ಸೇರಿ ಸುಮಾರು ಹತ್ತು ಮಂದಿ ಇದ್ದ ಲಿಫ್ಟ್ ಕೆಟ್ಟು ನಿಂತು ಕೆಲಕಾಲ ಪರದಾಟ ನಡೆಸಿದರು. ಸುಮಾರು 10 ನಿಮಿಷಗಳ ಕಾಲ ಸಚಿವರು ಹಾಗೂ ಶಾಸಕರು ಲಿಫ್ಟ್ನಲ್ಲಿ ಸಿಲುಕಿದ್ದಾರೆ.
ಘಟನೆಯಿಂದ ಕೆಲಹೊತ್ತು ಆಸ್ಪತ್ರೆಯ ಆವರಣ ಗೊಂದಲಕ್ಕೀಡಾಗಿತ್ತು. ಬಳಿಕ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಲಾಯಿತು. ತದನಂತರ ರಾಮಲಿಂಗಾ ರೆಡ್ಡಿ ಆಸ್ಪತ್ರೆ ಉದ್ಘಾಟಿಸಿ ಅಲ್ಲಿಂದ ತೆರಳಿದ್ದಾರೆ.