ಹುಬ್ಬಳ್ಳಿ : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಹುಬ್ಬಳ್ಳಿ-ವಿಜಯಪುರ, ಸೋಲಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಹುಬ್ಬಳಿಯಿಂದ ಮಂಟೂರಿಗೆ ತೆರಳುತ್ತಿದ್ದ ಬಸ್ನ ಇಂಜಿನ್ನಲ್ಲಿ ಹೊಗೆ ಕಾಣಿಸಿದಾಗ ನಂತರ ಬೆಂಕಿ ಸಣ್ಣ ಪ್ರಮಾಣದಲ್ಲಿ ಆವರಿಸಿದೆ. ಕೂಡಲೇ ಚಾಲಕ, ಕಂಡಕ್ಟರ್ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್ ನ ಒಳ ಭಾಗವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟು ಯಶಸ್ವಿಯಾದರು.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಹಳೆ ಬಸ್ ಆಗಿದ್ದರಿಂದ ಶಾರ್ಟ್ ಸರ್ಕ್ಯೂಟ್ನಿಂದಲೇ ಇಂತಹ ಅನಾಹುತ ಆಗುತ್ತಿವೆ. ಗ್ರಾಮಾಂತರ ಭಾಗದಲ್ಲಿ ಹಳೆ ಬಸ್ ಮತ್ತು ಅವಧಿ ಮುಗಿದ ಬಸ್ಗಳನ್ನು ಸರ್ಕಾರ ಒಡಿಸಬಾರದು ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.