ನವದೆಹಲಿ : ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು 18 ದಿನಗಳ ಎನ್ ಐಎ ವಶಕ್ಕೆ ನೀಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ.
ತಹವೂರ್ ರಾಣಾನನ್ನು ಕಸ್ಟಡಿಗೆ ಪಡೆಯಲು ಎನ್ ಐಎ ಅಧಿಕಾರಿಗಳು ಪ್ರಬಲ ಸಾಕ್ಷ್ಯ ಒದಗಿಸಿದ್ದು, ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ ತಹವೂರ್ ರಾಣಾನನ್ನು 18 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
26/11 ದಾಳಿಯ ಪ್ರಮುಖ ಆರೋಪಿಯಾಗಿರುವ ರಾಣಾ, ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಕೊನೆಯ ಪ್ರಯತ್ನ ವಿಫಲವಾದ ನಂತರ ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಎನ್ ಐಎ ಅಧಿಕಾರಿಗಳು ಭಾರತಕ್ಕೆ ಕರೆತಂದಿದ್ದಾರೆ.