ಚಿತ್ರದುರ್ಗ : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಲಾಗಿದೆ ಎಂದು ಶಂಕಿಸಿ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುಣುವಿನಡು ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಆಟೋ ಚಾಲಕನಾದ ಶ್ರೀನಿವಾಸ್ (30) ಎನ್ನುವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮೂರ್ನಾಲ್ಕು ಜನರ ಗುಂಪಿನಿಂದ ಶ್ರೀನಿವಾಸ್ ಕೊಲೆ ನಡೆದಿದೆ. ಮಹಿಳೆ ಜೊತೆ ಅನಂತ ಸಂಬಂಧ ಹಿನ್ನೆಲೆಯಲ್ಲಿ ಈ ಒಂದು ಭೀಕರವಾದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗದ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.