Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

17/10/2025 12:30 PM

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

17/10/2025 12:29 PM

BREAKING : `IRCTC’ ವೆಬ್‌ಸೈಟ್, ಅಪ್ಲಿಕೇಶನ್ ಸರ್ವರ್ ಡೌನ್ : ರೈಲ್ವೆ ಟಿಕೆಟ್‌ ಬುಕ್ ಮಾಡಲು ಪ್ರಯಾಣಿಕರ ಪರದಾಟ | IRCTC DOWN

17/10/2025 12:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BREAKING : ರಾಜ್ಯ ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5717/10/2025 11:47 AM

ಬೆಂಗಳೂರು : ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಹೊರಡಿಸಲಾಗಿರುತ್ತದೆ.

ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹ್ವಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ໖:16.04.20190 ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಮಾರ್ಪಡಿಸಿ ಈ ಕೆಳಕಂಡಂತೆ ಹೊಸ ಮಾರ್ಗ ಸೂಚಿಗಳನ್ನು ಅಧಿಸೂಚಿಸಲಾಗಿದೆ.

1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ. –

(a) ರಾಜ್ಯ ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆಯ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗಿಂತ ಹೆಚ್ಚಿನ ಜಿಲ್ಲೆಗಳಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಆಯೋಜಿಸಲಾಗುತ್ತದೆ.

(b) ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆ/ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರ ಭಾಗದಲ್ಲಿ ಆಯೋಜಿಸಲಾಗುತ್ತದೆ.

(c) ಜಿಲ್ಲಾಡಳಿತವು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ಜಿಲ್ಲಾಡಳಿತವು ಆಯಾ ಜಿಲ್ಲೆಗಳ ಯೋಜನೆಗಳಿಗೆ/ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

(d) ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು

ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತವು ಒಂದು ತಾಲ್ಲೂಕಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಅಥವಾ ತಾಲ್ಲೂಕಿನ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

(e) ರಾಜ್ಯದಲ್ಲಿ ಆಯೋಜಿಸುವ ಕೇಂದ್ರ ಪುರಸ್ಕೃತ/ಪ್ರಾಯೋಜಿತ/ಬೆಂಬಲಿತ ಕಾರ್ಯಕ್ರಮಗಳು: ಈ ಕಾರ್ಯಕ್ರಮಗಳು ರಾಜ್ಯಕ್ಕೆ ಸಂಬಂಧಿಸಿದ ಕೇಂದ್ರ ಪುರಸ್ಕೃತ / ಪ್ರಾಯೋಜಿತ/ಬೆಂಬಲಿತ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ರಾಜ್ಯದ ಸಹಯೋಗದೊಂದಿಗೆ ರಾಜ್ಯದ ಕೇಂದ್ರ ಸ್ಥಾನ ಅಥವಾ ರಾಜ್ಯದ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

2. ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಮಾರ್ಗಸೂಚಿಗಳು: –

(a) ಉದ್ಘಾಟನೆ: -ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಈ ಕೆಳಕಂಡ ಗಣ್ಯರು

ಉದ್ಘಾಟಿಸುತ್ತಾರೆ: –

ಮಾನ್ಯ ಮುಖ್ಯ ಮಂತ್ರಿಗಳು / ಮಾನ್ಯ ಉಪ ಮುಖ್ಯ ಮಂತ್ರಿಗಳು / ಸಂಬಂಧಪಟ್ಟ ಇಲಾಖಾ ಸಚಿವರು /ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು.

(b) ಅಧ್ಯಕ್ಷತೆ:-

(i) ಮಾನ್ಯ ಮುಖ್ಯ ಮಂತ್ರಿಗಳು / ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಇಲಾಖಾ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.

BREAKING: New guidelines announced for inviting public representatives to state government meetings and functions: Compliance with these rules is mandatory
Share. Facebook Twitter LinkedIn WhatsApp Email

Related Posts

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

17/10/2025 12:30 PM1 Min Read

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

17/10/2025 12:29 PM2 Mins Read

BREAKING : ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಕಚೇರಿಗೆ ಏಕಾಏಕಿ ಬೀಗ್ ಜಡಿದ ಪೊಲೀಸರು

17/10/2025 12:16 PM1 Min Read
Recent News

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

17/10/2025 12:30 PM

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

17/10/2025 12:29 PM

BREAKING : `IRCTC’ ವೆಬ್‌ಸೈಟ್, ಅಪ್ಲಿಕೇಶನ್ ಸರ್ವರ್ ಡೌನ್ : ರೈಲ್ವೆ ಟಿಕೆಟ್‌ ಬುಕ್ ಮಾಡಲು ಪ್ರಯಾಣಿಕರ ಪರದಾಟ | IRCTC DOWN

17/10/2025 12:20 PM

BREAKING : ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಕಚೇರಿಗೆ ಏಕಾಏಕಿ ಬೀಗ್ ಜಡಿದ ಪೊಲೀಸರು

17/10/2025 12:16 PM
State News
KARNATAKA

BREAKING : ಪ್ರತಿಕೂಲ ಹವಾಮಾನ ಹಿನ್ನೆಲೆ : ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು

By kannadanewsnow0517/10/2025 12:30 PM KARNATAKA 1 Min Read

ಬೆಂಗಳೂರು : ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು,…

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ನಿಮಗೆ ಸಿಗಲಿವೆ ಈ 8 ಸೌಲಭ್ಯಗಳು.!

17/10/2025 12:29 PM

BREAKING : ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಕಚೇರಿಗೆ ಏಕಾಏಕಿ ಬೀಗ್ ಜಡಿದ ಪೊಲೀಸರು

17/10/2025 12:16 PM

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿ ಮಾಂಸದ ಈ ಭಾಗಗಳನ್ನು ತಿನ್ನಬೇಡಿ, ದೇಹಕ್ಕೆ ಒಳ್ಳೆಯದಲ್ಲ.!

17/10/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.