ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
BIGG NEWS : ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅಮಿತ್ ಶಾ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸುಮಾರು 20 ನಿಮಿಷಗಳ ಚರ್ಚೆ ನಡೆಸಿದ್ದಾರೆ. ಸದ್ಯ ಅಮಿತ್ ಶಾ-ಬಿ.ಎಸ್. ಯಡಿಯೂರಪ್ಪ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅಮಿತ್ ಶಾ ಜತೆ ರಾಜ್ಯ ರಾಜಕಾರಣ ಕುರಿತು ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಶಿಕಾರಿಪುರ ಕ್ಷೇತ್ರಕ್ಕೆ ಸಂಬಂಧ ತಾವು ಕೈಗೊಂಡಿರುವ ತೀರ್ಮಾನ, ವಿಜಯೇಂದ್ರ ಸ್ಪರ್ಧೆ ಸೇರಿದಂತೆ ರಾಜ್ಯ ರಾಜಕಾರಣದ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
BIGG NEWS: ಅಪ್ಪು ನೆನಪಿಗಾಗಿ ನಾಳೆಯಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ..! ವಿವಿಧ ಆಕೃತಿಯ ಹೂವುಗಳಿಂದ ಸಿಂಗಾರ