ಬೆಂಗಳೂರು : 3 ದಿನಗಳ ಹಿಂದೆ ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್  ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ  ಒಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

BIG NEWS : ಇಂದು ʻIndian Navy Dayʼ: ಭಾರತೀಯ ನೌಕಾಪಡೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದರು. ಗುರುವಾರ  ಸಂಜೆ 6.30 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಚಂದ್ರು (10), ಸುಪ್ರೀತ್ (12) ಗಂಭೀರವಾಗಿ ಗಾಯಗೊಂಡದ್ದರು.  ಗಾಯಗೊಂಡಿದ್ದ ಚಂದ್ರು ಹಾಗೂ ಸುಪ್ರೀತ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,  ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

Share.
Exit mobile version