ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾಲ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ಭಯೋತ್ಪಾದಕರು ನಾಕಾ ಪಾರ್ಟಿಯ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ. ಸಧ್ಯ ಈ ಪ್ರದೇಶವನ್ನ ಪೊಲೀಸರು ಸುತ್ತುವರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ಲಾಲ್ ಬಜಾರ್ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ನಾಕಾ ಪಾರ್ಟಿಯ ಮೇಲೆ ಗುಂಡು ಹಾರಿಸಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಎಎಸ್ಐ ಅಹ್ಮದ್ ಅವ್ರಿಗೆ ತೀವ್ರ ಗಾಯಗಳಾಗಿದ್ದು, ಹುತಾತ್ಮರಾಗಿದ್ದಾರೆ.
#SrinagarTerrorIncidentUpdate: ASI Mushtaq Ahmad #succumbed to his injuries & attained #martyrdom. We pay rich #tribute to the #martyr for his supreme #sacrifice made in the line of duty. Other two injured personnel are being treated. Further details shall follow. https://t.co/8JNiZRrwDR
— Kashmir Zone Police (@KashmirPolice) July 12, 2022