ಬೆಂಗಳೂರು: ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಂದ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣದ ದರವನ್ನು ವಸೂಲಿ ಮಾಡುತ್ತಿದ್ದ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಆರ್ಟಿಓ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ತೆರಳುತ್ತಿದ್ದ ಬಸ್ಗಳಮೇಲೆ ದಾಳಿ ಮಾಡಿದ ಆರ್ಟಿಓ ಆಯುಕ್ತರು ಪ್ರಯಾಣಿಕರ ಬಳಿ ಇರೋ ಟಿಕೆಟ್ಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಹಬ್ಬವನ್ನೇ ನೆಪಮಾಡಿಕೊಂಡ ಕೆಲ ಬಸ್ ಮಾಲೀಕರುಪ್ರಯಾಣಿಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವ ಆರೋಪ ಹೆಚ್ಚಿನ ಪ್ರಮಾಣದಲ್ಲಿ ಕೇಳಿ ಬರುತ್ತಿದ್ದು, ಕಾನೂನು ಮೀರಿ ನಡೆದುಕೊಳ್ಳುತ್ತಿರುವ ವಿರುದ್ದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಿಂದ ವಿವಿಧ ಕಡೆಗಳಲ್ಲಿ ತೆರಳುವ ಪ್ರಯಾಣದ ಟಿಕೆಟ್ ದರದಲ್ಲಿ ಹೆಚ್ಚಳವಾಗಿರೋದು ನೋಡಿದ್ರೆ, ವಿಮಾನ ಪ್ರಯಾಣಕ್ಕಿಂತ ದುಬಾರಿಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.