ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 26 ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
BIGG NEWS : ಯುಪಿ ಶಾಲಾ ಬಾಲಕಿಯರಿಗೆ ಕರಾಟೆ ಕಡ್ಡಾಯ, ತರಬೇತಿಗೆ ಆದೇಶ : ಯೋಗಿ ಆದಿತ್ಯನಾಥ್ | Yogi Adityanath
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್, ಶಿಕ್ಷಕ ಬಸವರಾಜೇಂದ್ರ, ಫೋಟೋ ಗ್ರಾಫರ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದ್ದು, ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 26 ರವರೆಗೆ ವಿಸ್ತರಣೆ ಮಾಡಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಬಸವರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಸದ್ಯ, ಮುರುಘಾ ಮಠದ ಮುರುಘಾ ಶ್ರೀಗಳು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.
BIGG NEWS: ಕೋಲಾರದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ; ಧರೆಗುರುಳಿದ ವಿದ್ಯುತ್ ಕಂಬ