ನವದೆಹಲಿ : ಶಿರೋಮಣಿ ಅಕಾಲಿ ದಳವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ತನ್ನ ಬೆಂಬಲವನ್ನ ಘೋಷಿಸಿದೆ. ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಬಾದಲ್ ಮಾತನಾಡಿ, “ನಮ್ಮ ರಾಜಕೀಯ ದೃಷ್ಟಿಕೋನಗಳನ್ನ ಬದಿಗಿಟ್ಟು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತ್ರ ಎಲ್ಲರೂ ಒಮ್ಮತದಿಂದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ” ಎಂದು ಹೇಳಿದರು.

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಸಿಖ್ ವಿರೋಧಿಯಾಗಿರುವುದರಿಂದ ಅಕಾಲಿದಳವು ಯಾವುದೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನ ಬೆಂಬಲಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾವು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ” ಎಂದರು.

Share.
Exit mobile version