ಬೆಂಗಳೂರು : ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ.
ಕಾಂಗ್ರೆಸ್ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ ಎಂದರು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ಆ ರೀತಿಯ ವದಂತಿಯನ್ನು ಪ್ರತಿಪಕ್ಷದವರು ಹುಟ್ಟು ಹಾಕಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಯತೀಂದ್ರ ಹೇಳಿದ್ದಾರೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎರಡೆರಡು ‘ಬ್ರೇಕ್ಫಾಸ್ಟ್ ಮೀಟಿಂಗ್’ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ಅದಾದ ನಂತರ, ನಾಯಕತ್ವ ಬದಲಾವಣೆ ವಿಚಾರ ಏನಿದ್ದರೂ ಹೈಕಮಾಂಡ್ಗೆ ಬಿಟ್ಟಿದ್ದೇವೆ ಎಂದಿದ್ದರು. ಇಷ್ಟಾದ ನಂತರ ಇದೀಗ, ಸಿದ್ದರಾಮಯ್ಯ 5 ವರ್ಷ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಬಹಿರಂಗ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.








