ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ನಾಳೆಯೇ ಡೆಡ್ ಲೈನ್ ಹಿನ್ನೆಲೆಯಲ್ಲಿ ಬಿಬಿಎಂಪಿ ನೌಕರರಿಗೆ ಇಂದು, ನಾಳೆ ರಜೆ ಇಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ನಾಳೆಯೇ ಡೆಡ್ ಲೈನ್ ನೀಡಿರುವ ಹಿನ್ನೆಲೆಯಲ್ಲಿ ಗಡುವಿನೊಳಗೆ ಕೆಲಸ ಮಾಡಿ ಮುಗಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರ ಇಂದು ಹಾಗೂ ಸೆಪ್ಟೆಂಬರ್ 15 ರ ನಾಳೆ ಬಿಬಿಎಂಪಿ ನೌಕರರ ರಜೆ ಕ್ಯಾನ್ಸಲ್ ಮಾಡಲಾಗಿದೆ.
ಗುಂಡಿ ಮುಚ್ಚುವ ಸ್ಥಳದಲ್ಲಿ ವಲಯ ಅಧಿಕಾರಿಗಳು, ಚೀಪ್ ಇಂಜಿನಿಯರ್ ಗಳು ಇರಲೇಬೇಕು ಎಂದು ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.