Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಾದರೂ ನಡೆಯುತ್ತಿದೆಯೇ? : ರೆಡ್ ಫೋರ್ಟ್ ಕಾರು ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದ್ಲು ರೆಡ್ಡಿಟರ್ ಪೋಸ್ಟ್ ವೈರಲ್

11/11/2025 4:58 PM

BREAKING ; 12 ಜನರ ಸಾವಿಗೆ ಕಾರಣವಾದ ಇಸ್ಲಾಮಾಬಾದ್ ದಾಳಿ ಬಳಿಕ ಯುದ್ಧ ಘೋಷಿಸಿದ ಪಾಕಿಸ್ತಾನ

11/11/2025 4:26 PM

BREAKING : ಪಾಕಿಸ್ತಾನದ ವೇಗಿ ‘ನಸೀಮ್ ಶಾ’ ಮನೆಯ ಮೇಲೆ ಗುಂಡಿನ ದಾಳಿ, ಐವರು ಶಂಕಿತರ ಬಂಧನ

11/11/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆದಾಯ ತೆರಿಗೆದಾರರಿಗೆ ಬಂಪರ್ ಸುದ್ದಿ : 12 ಲಕ್ಷ ರೂ.ವರೆಗೆ ತೆರಿಗೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ.!
INDIA

BREAKING : ಆದಾಯ ತೆರಿಗೆದಾರರಿಗೆ ಬಂಪರ್ ಸುದ್ದಿ : 12 ಲಕ್ಷ ರೂ.ವರೆಗೆ ತೆರಿಗೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ.!

By kannadanewsnow5701/02/2025 12:15 PM

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.

ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ಶೂರೆನ್ಸ್ ವಲಯಗಳಲ್ಲಿ ಎಫ್ ಡಿಐ ಹೆಚ್ಚಳ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲೂ ಇಂಡಿಯಾ ಪೋಸ್ಟ್ ಪೇಮೆಂಟ್ ಜಾರಿಗೆ ತಲಾಗುವುದು ಎಂದು ತಿಳಿಸಿದ್ದಾರೆ.

ವಿಮಾ ವಲಯದ ಎಫ್‌ಡಿಐ ಮಿತಿಯನ್ನು ಶೇ. 74 ರಿಂದ 100 ಕ್ಕೆ ಹೆಚ್ಚಿಸಲಾಗುವುದು. ಈ ವರ್ಧಿತ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೈಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುವುದು ಮತ್ತು ಸರಳಗೊಳಿಸಲಾಗುವುದು” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಗಳ ಬೆಲೆ ಇಳಿಕೆ ಮಾಡಲಾಗುವುದು, ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 1.5 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮೊಬೈಲ್, ಚರ್ಮದ ಉತ್ಪನ್ನಗಳು, ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಳ, ಎಲೆಕ್ಟ್ರಿಕ್ ಕಾರುಗಳ ಬೆಲೆಗಳನ್ನು ಇಳಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ

2025 ರ ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ರಿಯಾಯಿತಿ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ಹೊಸ ತೆರಿಗೆ ಪದ್ಧತಿಯಡಿಯಲ್ಲಿ ₹7,00,000 ವರೆಗೆ ಒಟ್ಟು ಆದಾಯ ಹೊಂದಿರುವ ನಿವಾಸಿ ವ್ಯಕ್ತಿಗಳು ಯಾವುದೇ ತೆರಿಗೆಯನ್ನು ಪಾವತಿಸುವುದಿಲ್ಲ” ಎಂದು ಹೇಳಿದರು. “ಹೊಸ ಪದ್ಧತಿಯಡಿಯಲ್ಲಿ ನಿವಾಸಿ ವ್ಯಕ್ತಿಗಳಿಗೆ ರಿಯಾಯಿತಿಯನ್ನು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ, ಇದರಿಂದಾಗಿ ಅವರ ಒಟ್ಟು ಆದಾಯ ₹12,00,000 ವರೆಗೆ ಇದ್ದರೆ ಅವರು ತೆರಿಗೆ ಪಾವತಿಸುವುದಿಲ್ಲ.” “ಹೊಸ ತೆರಿಗೆ ಪದ್ಧತಿಯಡಿಯಲ್ಲಿ ಈ ಹಿಂದೆ ಒದಗಿಸಲಾದ ಕನಿಷ್ಠ ಪರಿಹಾರವು ₹12,00,000 ಕ್ಕಿಂತ ಸ್ವಲ್ಪ ಹೆಚ್ಚಿನ ಆದಾಯಕ್ಕೂ ಅನ್ವಯಿಸುತ್ತದೆ.

BREAKING : 12 ಲಕ್ಷ ರೂ.ವರೆಗೆ ತೆರಿಗೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ.! BREAKING: No tax up to Rs. 12 lakh: Nirmala Sitharaman's announcement!
Share. Facebook Twitter LinkedIn WhatsApp Email

Related Posts

ಏನಾದರೂ ನಡೆಯುತ್ತಿದೆಯೇ? : ರೆಡ್ ಫೋರ್ಟ್ ಕಾರು ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದ್ಲು ರೆಡ್ಡಿಟರ್ ಪೋಸ್ಟ್ ವೈರಲ್

11/11/2025 4:58 PM1 Min Read

BREAKING : ಪಾಕಿಸ್ತಾನದ ವೇಗಿ ‘ನಸೀಮ್ ಶಾ’ ಮನೆಯ ಮೇಲೆ ಗುಂಡಿನ ದಾಳಿ, ಐವರು ಶಂಕಿತರ ಬಂಧನ

11/11/2025 4:20 PM1 Min Read

BREAKING : 2028ರ ಒಲಿಂಪಿಕ್ಸ್’ನಲ್ಲಿ ಸ್ಪರ್ಧಿಸದಂತೆ ಎಲ್ಲಾ ‘ಟ್ರಾನ್ಸ್ಜೆಂಡರ್ ಕ್ರೀಡಾಪಟು’ಗಳ ನಿಷೇಧಕ್ಕೆ ‘IOC’ ನಿರ್ಧಾರ

11/11/2025 4:03 PM1 Min Read
Recent News

ಏನಾದರೂ ನಡೆಯುತ್ತಿದೆಯೇ? : ರೆಡ್ ಫೋರ್ಟ್ ಕಾರು ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದ್ಲು ರೆಡ್ಡಿಟರ್ ಪೋಸ್ಟ್ ವೈರಲ್

11/11/2025 4:58 PM

BREAKING ; 12 ಜನರ ಸಾವಿಗೆ ಕಾರಣವಾದ ಇಸ್ಲಾಮಾಬಾದ್ ದಾಳಿ ಬಳಿಕ ಯುದ್ಧ ಘೋಷಿಸಿದ ಪಾಕಿಸ್ತಾನ

11/11/2025 4:26 PM

BREAKING : ಪಾಕಿಸ್ತಾನದ ವೇಗಿ ‘ನಸೀಮ್ ಶಾ’ ಮನೆಯ ಮೇಲೆ ಗುಂಡಿನ ದಾಳಿ, ಐವರು ಶಂಕಿತರ ಬಂಧನ

11/11/2025 4:20 PM

BREAKING : 2028ರ ಒಲಿಂಪಿಕ್ಸ್’ನಲ್ಲಿ ಸ್ಪರ್ಧಿಸದಂತೆ ಎಲ್ಲಾ ‘ಟ್ರಾನ್ಸ್ಜೆಂಡರ್ ಕ್ರೀಡಾಪಟು’ಗಳ ನಿಷೇಧಕ್ಕೆ ‘IOC’ ನಿರ್ಧಾರ

11/11/2025 4:03 PM
State News
KARNATAKA

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

By kannadanewsnow0911/11/2025 3:57 PM KARNATAKA 2 Mins Read

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ…

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

11/11/2025 3:42 PM

BIG NEWS : ಬಿಹಾರ್ ಚುನಾವಣೆ ವೇಳೆಯೇ ದೆಹಲಿಯಲ್ಲಿ ಸ್ಪೋಟ : ಕೇಂದ್ರವೇ ತನಿಖೆ ನಡೆಸಲಿ ಎಂದ ಸಿಎಂ ಸಿದ್ದರಾಮಯ್ಯ

11/11/2025 3:18 PM

BIG NEWS: ‘ರಾಜ್ಯ ಸರ್ಕಾರ’ದ ಆದೇಶಕ್ಕೂ ಡೋಂಟ್ ಕೇರ್: ‘ಸಚಿವರ ಸಭೆ’ಯಲ್ಲೇ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಬಳಕೆ

11/11/2025 2:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.