ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣನವರ್ ಮಹೇಶ್ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು ಇದೀಗ ಗಿರೀಶ್ ಮಟ್ಟನನ್ನವರು ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೌಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಆಶೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಗಿರೀಶ್ ಮಟ್ಟಣ್ಣನವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬುವವರಾದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಯುಟ್ಯೂಬ್ ಚಾನೆಲ್ ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿದ್ದಾರೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಕೇಳಿಬಂದಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ.