ಬೆಂಗಳೂರು :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಆರತಕ್ಷತೆ ವೇಳೆ ದಾಳಿ ನಡೆಸಿ ಅಧಿಕಾರಿಗಳು ಬಾಲ್ಯ ವಿವಾಹ ತಡೆದಿರುವ ಘಟನೆ ನಡೆದಿದೆ.
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಚನ್ನಪ್ಪ ಸುಬ್ಬಮ್ಮ ಕಲ್ಯಾಣಮಂಟಪದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಆರತಕ್ಷತೆ ತಡೆದಿದ್ದಾರೆ.
ಪೋಷಕರು 17 ವರ್ಷದ ಬಾಲಕಿಗೆ ಮದುವೆ ಮಾಡಿಸುತ್ತಿದ್ದರು. ವಿಷಯ ತಿಳಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ದೂರಿನ ಮೇರೆಗೆ ಪೋಲಿಸರೊಂದಿಗೆ ದಾಳಿ ನಡೆಸಿ ಆರತಕ್ಷತೆ ವೇಳೆಯಲ್ಲಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ.