ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಬೆಟ್ಟಿಂಗ್ ಪ್ಲಾಟ್ಫಾರ್ಮ್ 1xBet ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜ್ ಮತ್ತು ಉತ್ತಪ್ಪ ಇಬ್ಬರನ್ನೂ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಹೇಳಿಕೆ ದಾಖಲಿಸಲು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 23 ರಂದು ಯುವರಾಜ್ ಏಜೆನ್ಸಿಯ ಮುಂದೆ ಹಾಜರಾಗಲಿದ್ದರೆ, ಸೆಪ್ಟೆಂಬರ್ 22 ರಂದು ಉತ್ತಪ್ಪ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇತ್ತೀಚೆಗೆ ಸುರೇಶ್ ರೈನಾ, ಶಿಖರ್ ಧವನ್ ಮತ್ತು ಯುವರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ, ಈ ಪ್ರಕರಣದಲ್ಲಿ ಸಮನ್ಸ್ ಜಾರಿಯಾದ ನಾಲ್ಕನೇ ಮಾಜಿ ಭಾರತೀಯ ಕ್ರಿಕೆಟಿಗ ಅವರು. ಯುವರಾಜ್ ಈಗಾಗಲೇ ಜೂನ್ನಲ್ಲಿ ಒಮ್ಮೆ ಏಜೆನ್ಸಿಯ ಮುಂದೆ ಹಾಜರಾಗಿದ್ದಾರೆ. ಏತನ್ಮಧ್ಯೆ, ನಟ ಸೋನು ಸೂದ್ ಅವರಿಗೂ ಸೆಪ್ಟೆಂಬರ್ 2 ರಂದು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.