ರಂಗರೆಡ್ಡಿ : ತೆಲಂಗಾಣದ ರಂಗರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಭೀಕರ ದುರಂತಕ್ಕೆ ಕಾರಣ ಬಹಿರಂಗವಾಗಿದೆ.
ಇಂದು ಬೆಳಗ್ಗೆ ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 21ಮಂದಿ ಸಾವನ್ನಪ್ಪಿದ್ದಾರೆ.ಈ ಭೀಕರ ಅಪಘಾತಕ್ಕೆ ಟಿಪ್ಪರ್ ಲಾರಿಯ ಓವರ್ ಲೋಡ್, ಬಸ್ ನ ಅತಿವೇಗವೇ ಕಾರಣ ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಬಸ್ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಈ ಅಪಘಾತದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ನೌಕರರು ಎಂದು ಪೊಲೀಸರು ಹೇಳುತ್ತಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಪ್ರತಿದಿನ ಬೆಳಿಗ್ಗೆ ಹೈದರಾಬಾದ್ಗೆ ಹೋಗುತ್ತಾರೆ. ಭಾನುವಾರ ರಜೆ ಇದ್ದ ಕಾರಣ ಕೆಲವರು ತಮ್ಮ ಮನೆಗಳಿಗೆ ತೆರಳಿ ವಾಪಸ್ ಪ್ರಯಾಣ ಬೆಳೆಸಿದರು. ಈ ಅವಘಡದಿಂದಾಗಿ ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಭಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.
🚨 Breaking News 🚨
A horrific road accident in #Rangareddy district An #RTC bus from #Tandur depot collided with a #TipperLorry carrying gravel near #Mirzaguda on the #Hyderabad #Bijapur highway
Driver died on the spot;several passengers injured, some under gravel.#Chevella pic.twitter.com/0mJMLEYIzk
— Rajesh Kumar Reddy E V (@rajeshreddyega) November 3, 2025








