ಶ್ರೀನಗರ : ಜಮ್ಮುಕಾಶ್ಮೀರದ ಎಲ್ ಒಸಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ದಾಳಿ ಮುಂದುವರೆಸಿದೆ.
ಭಾರತ-ಪಾಕ್ ನಡುವಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ಗಡಿಗಳ ಮೇಲೆ ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ.