ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಚಂದಾಪುರದ ಬಿಗ್ ಮಾರ್ಟ್ ಬಳಿ ಘಟನೆ ನಡೆದಿದೆ. ಮೃತರನ್ನು ಕೇರಳ ಮೂಲದ ಅನಿಲ್ ಪಿ ಸುಂದರ್ (27) ಎಂದು ಗುರುತಿಸಲಾಗಿದೆ.
ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಅನಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.