ಅಹ್ಮದಾಬಾದ್ : ಇಂದು ಮಧ್ಯಾಹ್ನ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171, ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಬೃಹತ್ ರಕ್ಷಣಾ ಪ್ರಯತ್ನಗಳಿಗೆ ನಾಂದಿ ಹಾಡಿತು. ಬೋಯಿಂಗ್ 787 ಡ್ರೀಮ್ಲೈನರ್ (VT-ANB) ವಿಮಾನವು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು ಎಂಬುದಾಗಿ ಡಿಜಿಸಿಎ ಮಾಹಿತಿ ಬಿಡುಗಡೆ ಮಾಡಿದೆ.
ಇನ್ನು ವಿಮಾನ ಚಲಾಯಿಸುತಿದ್ದ ಪೈಲಟ್ ಸುಮಿತ್ ಸಭರ್ವಾಲ್ ಮಧ್ಯಾಹ್ನ 1:30 ಕ್ಕೆ ಏರ್ಪೋರ್ಟ್ ನಿಂದ ಟೀಕ್ ಆಫ್ ಆಗಿತ್ತು. ಅಪಾಯ ಅರಿತ ತಕ್ಷಣ ಎಟಿಸಿಗೆ ಪೈಲಟ್ ಸುಮಿತ್ ಕರೆ ಮಾಡಿದ್ದರು. ಸುಮಿತ್ ATC ಗೆ MAYDAY ಕೊನೆಯ ಕರೆ ಮಾಡಿದ್ದರು ಎನ್ನಲಾಗಿದೆ. MAYDAY ಅಂದರೆ ಕಟ್ಟಕಡೆಯ ಕರೆ ಎಂದರ್ಥ. ಜೀವಗಳಿಗೆ ಕಂಟಕ ಪಕ್ಕ ಎಂಬ ಸಂದೇಶವೇ ಇದರ ಅರ್ಥವಾಗಿದೆ. ವಿಮಾನ ಚಲಾಯಿಸುತ್ತಿದ್ದ ಪೈಲಟ್ ಸುಮಿತ್ ಸಭರ್ವಾಲ್ ಕೊನೆಯ ಕರೆ ಮಾಡಿದ್ದರು.
8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದ ಸುಮಿತ್
ಗುಜರಾತಿನ ಅಹ್ಮದಾಬಾದ್ ಏರ್ಪೋರ್ಟ್ ಬಳಿ ಇಂದು ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲಟ್ 8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.
ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ 8,200 ಗಂಟೆಗಳ ಅನುಭವ ಹೊಂದಿದ್ದರೆ ಸಹ-ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಕರೆ ಬಂದಿದೆ. ನಂತರ ಎಟಿಸಿ ಮಾಡಿದ ಕರೆಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.