ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 242 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ಘಟನೆ ಸಂಭವಿಸಿದೆ.
ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
Here is the video of #Ahmedabad plane crash pic.twitter.com/PzfatXexwj
— किरण कारंजेकर (@KSKvoice) June 12, 2025
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿಯವರು ಇಬ್ಬರು ಸಚಿವರು ಅಹಮದಾಬಾದ್’ಗೆ ತೆರಳಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಸೂಚಿಸಿದ್ದಾರೆ.
ಅಂದ್ಹಾಗೆ, ಅಪಘಾತದ ನಂತರ ಶಾ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ್ದರು.
BREAKING :’ದುರಂತ ಅಪಘಾತ’ : ಅಪಘಾತ ದೃಢಪಡಿಸಿದ ‘ಏರ್ ಇಂಡಿಯಾ ಅಧ್ಯಕ್ಷ’, ಸಂತ್ರಸ್ತ ಕುಟುಂಬಗಳಿಗೆ ಬೆಂಬಲದ ಭರವಸೆ
BREAKING : ಅಹಮದಾಬಾದ್’ನಲ್ಲಿ ವಿಮಾನ ಪತನ ; ಕನಿಷ್ಠ 30 ಮಂದಿ ದುರ್ಮರಣ, ಮಾಹಿತಿ ಪಡೆದ ‘ಪ್ರಧಾನಿ’
BREAKING: ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ಪತನ: ಕನಿಷ್ಠ 30 ಪ್ರಯಾಣಿಕರು ಸಾವು