ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್ ಇಂದು ಕಮಿಷನರ್ ಗೆ ದೂರು ನೀಡಿದೆ.
ಆರ್ಸಿಬಿ ವಿಜಯೋತ್ಸವಕ್ಕೆ ಬಂದ್ದಿದ್ದ ಜನರ ಕಾಲ್ತುಳಿತದಿಂದ ನೆಲಮಟ್ಟದ ಗಿಡಗಳು ನೆಲಸಮವಾಗಿವೆ. ಕಬ್ಬನ್ ಪಾರ್ಕ್ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್ನಿಂದ ಇಂದು ಕಮಿಷನರ್ ಗೆ ದೂರು ನೀಡಿದೆ. ಆರ್ ಸಿಬಿ, ಡಿಎನ್ ಎ ಕಂಪನಿ, ಕೆ ಎಸ್ ಸಿಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಬೆಂಗಲೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದು, ವಿಧಾನಸೌಧ ಹಾಗೂ ಹೈಕೋರ್ಟ್ ಮುಂಭಾಗದಲ್ಲಿ ಸೇರಿದ ಭಾರಿ ಜನರ ದಟ್ಟಣೆಯಿಂದಾಗಿ ಬ್ಯಾರಿಕೇಡ್ಗಳು, ನೆಲಮಟ್ಟದ ಗಿಡಗಳನ್ನು ಜನ ತುಳಿದು ಹಾಕಿದ್ದಾರೆ. ಇದರಿಂದಾಗಿ ವಿಧಾನಸೌಧ ಮುಂಭಾಗದ ಗಿಡಗಳೆಲ್ಲಾ ಮುರಿದು ಒಣಗಿ ಹೋಗಿ ಸರ್ವನಾಶವಾಗಿದೆ.