ತುಮಕೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಅದರಲ್ಲೂ ಯುವಕರಲ್ಲಿ ಕೂಡ ಈ ಒಂದು ಹೃದಯಘಾತ ಸಂಭವಿಸುತ್ತಿದ್ದು, ಆತಂಕಕ್ಕೆ ಎಡೆಮಾಡಿದೆ. ಇದೀಗ ತುಮಕೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಘಾತದಿಂದ ಸಾವನಪ್ಪಿದ್ದಾರೆ.
ಹೌದು ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಕಾಂತರಾಜುಗೆ ಹೃದಯಘಾತವಾಗಿದೆ. ತಕ್ಷಣ ಅವರನ್ನು ಹುಳಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕಾಂತರಾಜ್ ಸಾವನ್ನಪ್ಪಿದ್ದಾರೆ. ಕಾಂತರಾಜ್ ತಿಪಟೂರು ನಗರ ಠಾಣೆಯಲ್ಲಿ ಅಷ್ಟೆ ಅಲ್ಲದೆ ಹಲವು ಪೊಲೀಸ್ ಠಾಣೆಗಳಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.