Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಹೊಸ ವರ್ಷಾಚರಣೆ’ಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BREAKING : ರಾಜ್ಯದಲ್ಲಿ `ಹೊಸ ವರ್ಷಾಚರಣೆ’ಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5728/12/2025 12:36 PM

ಬೆಂಗಳೂರು : ರಾಜ್ಯದ  ಪೊಲೀಸ್ ಇಲಾಖೆಯು ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಸಂಕೋಚತಾ/ಹಿಂಜರಿಕಾ ಮನೋಭಾವವನ್ನು ಮೀರುವಂತೆ ಮಾಡುತ್ತದೆ. ಕೌಂಟ್‌ಡೌನ್‌ಗಳು ಮತ್ತು ಸಂಭ್ರಮದ ಕ್ಷಣಗಳಿಂದ ಉಂಟಾಗುವ ಉಲ್ಲಾಸವು ಜನಸಮೂಹದಲ್ಲಿ ಸಾಮೂಹಿಕ ಪ್ರೇರೇಪಣೆಯನ್ನು ಸೃಷ್ಟಿಸಿ, ದಟ್ಟ ಗುಂಪಿನೊಳಗಿರುವ ಕಾರಣ ಯಾವ ನಡೆಗೂ ಅಪಾಯವಿಲ್ಲವೆಂಬ ತಪ್ಪು ಕಲ್ಪನೆಯನ್ನು ಉಂಟುಮಾಡುತ್ತದೆ. ವೇದಿಕೆಗಳಲ್ಲಿ ಜನಸ್ತೋಮದ ಹರಿವು ಅಥವಾ ಪಟಾಕಿ ಸಿಡಿಸುವಂತಹ ಪ್ರದರ್ಶನಗಳು ಮುಂತಾದ ಹಲವು ಕಾರಣಗಳಿಂದಾಗಿ ಅಪ್ರಜ್ಞಾತ್ಮಕ ವರ್ತನೆಗಳು ಕಂಡುಬರುತ್ತವೆ. ಜನಸಮೂಹದ ಹರಿವನ್ನು ಒಮ್ಮೆಲೇ ಪ್ರೇರೇಪಿಸಿ ಅಪಾಯಕರ ಅಲೆಗಳಂತೆ ರೂಪುಗೊಳ್ಳಬಹುದಾದಂತಹ ಸಂಗೀತದ ತೀವ್ರತೆಯ ಘಟನಾವಳಿಗಳನ್ನು ಪೊಲೀಸ್ ಅಧಿಕಾರಿಗಳು ಗಮನಿಸಬೇಕಿದೆ. ಪಟಾಕಿ ಸಿಡಿಯುವಲ್ಲಿ ವಿಳಂಬವಾದರೆ ನಿರಾಶೆ ಉಂಟಾಗಿ, ಜನಸಮೂಹದ ಸಂಭ್ರಮವು ತಕ್ಷಣವೇ ಅಸಹನೆ ಮತ್ತು ಕೋಪಕ್ಕೆ ತಿರುಗುವ ಸಾಧ್ಯತೆ ಇರುತ್ತದೆ. ಗುಂಪಿನಲ್ಲಿ ವದಂತಿಗಳು ವೇಗವಾಗಿ ಹರಡಿ, ಅಪಾಯದ ಭ್ರಮೆಯು ಆತಂಕವನ್ನು ಹೆಚ್ಚಿಸುತ್ತದೆ. ಜನಸ್ತೋಮದ ಗುಂಪು ತಮ್ಮ ಸುತ್ತಮುತ್ತಲ ವ್ಯಕ್ತಿಗಳ ವರ್ತನೆಯನ್ನು ಅನುಸರಿಸುವುದರಿಂದ ವ್ಯಕ್ತಿಗತ ನಿಯಂತ್ರಣ ಕಷ್ಟಸಾಧ್ಯವಾಗುತ್ತದೆ.

ಹೊಸ ವರ್ಷಾಚರಣೆಗಾಗಿ ಇಳಿಜಾರು ಮೇಲೆ ಅಥವಾ ಜಾರುವ ಸ್ಥಳಗಳು, ಮೆಟ್ಟಿಲುಗಳಿಂದ ಕೂಡಿದ ಸ್ಥಳಗಳಲ್ಲಿ ಸೇರುವ ಜನಸ್ತೋಮಕ್ಕೆ ಇನ್ನಷ್ಟು ಅಪಾಯಗಳಿರುತ್ತವೆ. ಮಾಲ್‌ಗಳಂತಹ ಕಟ್ಟಡದೊಳಗಿಂದ, ಉಷ್ಣತೆ ಮತ್ತು ಶಬ್ದ ಹೊರಹೋಗದಂತಹ ವಾತಾವರಣದ ಹಿನ್ನೆಲೆಯಲ್ಲಿ ಈ ಸ್ಥಳಗಳಲ್ಲಿ ಭಾವನಾತ್ಮಕ ಅಸ್ಥಿರತೆ ಹೆಚ್ಚಿರುತ್ತದೆ. ಮದ್ಯಪಾನದಿಂದ ಉಂಟಾಗುವ ಆಕ್ರಮಣಶೀಲತೆಗಳಂತಹ ವರ್ತನೆಗಳು, ಸಾಮಾನ್ಯವಾಗಿ ಮದ್ಯಮಾರಾಟ ಸ್ಥಳಗಳ ಬಳಿ ಚುಡಾಯಿಕೆ (ಈವ್-ಟೀಸಿಂಗ್) ಅಥವಾ ಜಗಳಗಳ ರೂಪದಲ್ಲಿ ಕಂಡುಬರುತ್ತವೆ. ದಟ್ಟವಾದ ಜನರ ಗುಂಪುಗಳಲ್ಲಿ ವೈಯಕ್ತಿಕ ಅಂತರ ಕುಗ್ಗುವುದರಿಂದ ಘರ್ಷಣೆ /ಹೊಡೆದಾಟಗಳು ಉಂಟಾಗುತ್ತವೆ. ಕೌಂಟ್‌ಡೌನ್ ಘೋಷಣೆಗಳು ಗುಂಪನ್ನು ಏಕೀಕರಿಸಿ, ಸಂಘರ್ಷಗಳನ್ನು ಒಮ್ಮೆಲೇ ಚಿಮ್ಮುವವರೆಗೆ ಮುಚ್ಚಿಡುತ್ತವೆ. ಆದರೆ ಅವು ಏಕಾಏಕಿ ಸ್ಫೋಟಗೊಳ್ಳುತ್ತವೆ. ನಿರ್ಗಮನ ದ್ವಾರಗಳ ಬಳಿ ಕಂಡುಬರುವಂತಹ ಬಾಟಲ್‌ನೆಕ್ ಮೇಲೆ ಅಧಿಕಾರಿಗಳು ತೀವ್ರ ನಿಗಾ ವಹಿಸುವುದು ಸೂಕ್ತ.

ಗುಂಪಿನಲ್ಲಿರುವ ವ್ಯಕ್ತಿಗಳು ಬೇಜವಾಬ್ದಾರಿ ಮತ್ತು ಧ್ವಂಸಕೃತ್ಯ ಅಥವಾ ಅಶಿಸ್ತಿನ ವರ್ತನೆಗೆ ಕಾರಣವಾಗುತ್ತವೆ. ತಡರಾತ್ರಿಯ ದಣಿವು ನಿರ್ಧಾರವನ್ನು ಕೈಗೊಳ್ಳುವ ಸಾಮರ್ಥ್ಯವನ್ನು ಇನ್ನಷ್ಟು ಕುಗ್ಗಿಸುತ್ತದೆ. ಸಾಮಾಜಿಕ ಮಾಧ್ಯಮಗಳ ಹೈಪ್ ಅತಿರೇಕದ ನಿರೀಕ್ಷೆಗಳ ನಿರೀಕ್ಷೆಯು ಹುಸಿಯಾಗಿ, ನಿರಾಶೆಯಿಂದ ಒತ್ತಡವನ್ನು ಹೆಚ್ಚಿಸಬಹುದು. ಇಂತಹ ಸಮಯದಲ್ಲಿ ಪೊಲೀಸರ ಗೋಚರತೆಯು ಜನರಲ್ಲಿ ಭರವಸೆ ಮೂಡಿಸಿ, ಗುಂಪಿನ ಅತಿರೇಕವನ್ನು ತಡೆಯುತ್ತದೆ. ಪೊಲೀಸರ ಮಧ್ಯಪ್ರವೇಶದಿಂದ ಘಟನೆಗಳು ಬೃಹದಾಕಾರವಾಗುವುದನ್ನು ಪರಿಣಾಮಕಾರಿಯಾಗಿ ತಡೆಯಬಹುದಾಗಿದೆ. ಪೊಲೀಸರ ಸ್ವಯಂಪ್ರೇರಿತ ಕ್ರಮಗಳು ಶಾಂತಿ, ಸುರಕ್ಷತೆಯನ್ನು ಕಾಯ್ದುಕೊಳ್ಳುವ ಗುರಿಯನ್ನು ಯಶಸ್ವಿಯಾಗಿ ನಿಭಾಯಿಸಲು ಸಹಕಾರ ನೀಡುತ್ತವೆ.

ಮೇಲ್ಕಂಡ ಹಲವಾರು ಕಾರಣಗಳಿಂದಾಗಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಯಾವುದೇ ಅವಘಡಗಳನ್ನು ತಡೆಯಲು, ಸಾರ್ವಜನಿಕ ಶಾಂತಿ ಕಾಪಾಡಲು ಹಾಗೂ ರಾಜ್ಯದಾದ್ಯಂತ ಸುರಕ್ಷಿತ ಆಚರಣೆಗಳನ್ನು ಖಚಿತಪಡಿಸಲು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈ ಕೆಳಕಾಣಿಸಿದ ನಿರ್ದೇಶನಗಳನ್ನು ಹೊರಡಿಸಲಾಗಿದೆ.

ಮತ್ತು 1. ಸಂಭ್ರಮಾಚರಣೆ ಹಾಟ್‌ ಸ್ಪಾಟ್ಗಳು, ಬೀಚ್‌ಗಳು, ಮಾಲ್‌ಗಳು, ಬಾರ್‌ಗಳು ಹೆದ್ದಾರಿಗಳನ್ನು ಒಳಗೊಂಡು ಅಪಾಯಕಾರಿಯಾದ ಪ್ರದೇಶಗಳಲ್ಲಿ ಸಾಕಾಗುವಷ್ಟು ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜಿಸುವುದು.

ವಾಹನಗಳ ನಿರಂತರ ಗಸ್ತು, ಪೊಲೀಸರ ಕಾಲ್ನಡಿಗೆ ಗಸ್ತು, ಬೈಕ್ ಗಳ ಗಸ್ತು ಹಾಗೂ ಅಶ್ವಾರೋಹಿ ಗಸ್ತುಗಳು ಸಾರ್ವಜನಿಕರಲ್ಲಿ ಪೊಲೀಸರ ಗೋಚರತೆಯನ್ನು ಹೆಚ್ಚಿಸುತ್ತದೆ ಹಾಗೂ ತುರ್ತು ಪ್ರತಿಕ್ರಿಯೆ ಸಾಧ್ಯವಾಗಿಸುತ್ತದೆ.

ಪೂರ್ವಯೋಜಿತ ಸ್ಥಳಗಳಲ್ಲಿ ಟ್ರಾಫಿಕ್ ಮತ್ತು ಎಸ್.ಡಬ್ಲೂ.ಎ.ಟಿ ತಂಡಗಳನ್ನು ಒಳಗೊಂಡಂತೆ ಎಲ್ಲಾ ಘಟಕಗಳನ್ನು ನಿಯೋಜಿಸಿಕೊಳ್ಳುವುದು ವೀಡಿಯೋಗ್ರಾಫಿ ಮಾಡಿಸುವುದು. ಹಾಗೂ ಎಲ್ಲಾ ಚೆಕ್‌ ಪೋಸ್ಟ್‌ಗಳಲ್ಲಿ

ಪ್ರಮುಖ ಕಾರ್ಯಕ್ರಮ ಸ್ಥಳಗಳು ಮತ್ತು ಹೆದ್ದಾರಿಗಳ ಪ್ರವೇಶ/ನಿರ್ಗಮನ ದ್ವಾರಗಳಲ್ಲಿ “ಡಬ್ಲೂ” ಮಾದರಿಯ ಬ್ಯಾರಿಕೇಡ್‌ಗಳು, ಪ್ರತಿಫಲಕ ಸೂಚನಾ ಫಲಕಗಳು ಮತ್ತು ಬೆತ್ ಅನಾಲೈಸರ್‌ಗಳೊಂದಿಗೆ ವಾಹನ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ; ಮದ್ಯಪಾನ ಚಾಲನೆಗೆ ಶೂನ್ಯ ಸಹಿಷ್ಣುತೆ ಪಾಲಿಸಿ ತಕ್ಷಣವೇ ಎಫ್‌ಐಆರ್ ದಾಖಲಿಸಿ ವಾಹನ ಜಪ್ತಿ ಮಾಡಿ, ನಿಯಮಾನುಸಾರ ಕ್ರಮ ಜರುಗಿಸುವುದು.

ಪಬ್ಲಿಕ್ ಅಡ್ರೆಸ್ ಸಿಸ್ಟಂ (ಧ್ವನಿವರ್ಧಕ) ಮೂಲಕ ಡೆಸಿಗ್ನೆಟೆಡ್ ಡ್ರೈವರ್‌ಗಳು ಮತ್ತು ರೈಡ್-ಶೇರಿಂಗ್‌ನ್ನು ಉತ್ತೇಜಿಸಿ, ನೈಟ್‌ ಲೈಫ್ ವಲಯಗಳ ಸುತ್ತ ಹೆಚ್ಚುವರಿ ಗಸ್ತು ವ್ಯವಸ್ಥೆ ಏರ್ಪಡಿಸುವುದು ಸೂಕ್ತ.

1,000ಕ್ಕಿಂತ ಹೆಚ್ಚು ಜನಸಮೂಹ ಸೇರಬಹುದಾದ ಸ್ಥಳಗಳಲ್ಲಿ ಪೆರಿಮೀಟರ್ ತಪಾಸಣೆ ಮತ್ತು ದೃಶ್ಯ ತಪಾಸಣೆ ಸೇರಿದಂತೆ ಇತರೆ ಅಪಾಯಗಳ ಕುರಿತು ಮೌಲ್ಯಮಾಪನ ಮಾಡಿ ಕ್ರಮ ಕೈಗೊಳ್ಳುವುದು.

ಮಹಿಳೆಯರನ್ನು ಚುಡಾಯಿಸುವುದನ್ನು ತಡೆಯಲು ಮಹಿಳಾ ಪೊಲೀಸ್ ತಂಡಗಳನ್ನು ನಿಯೋಜಿಸಿ; ಆಂಬ್ಯುಲೆನ್ಸ್, ಅಗ್ನಿಶಾಮಕ ಮತ್ತು ವೈದ್ಯಕೀಯ ತಂಡಗಳನ್ನು ಸಿದ್ಧ ಸ್ಥಿತಿಯಲ್ಲಿ ಇಟ್ಟು, ಸ್ಪಷ್ಟ ನಿರ್ಗಮನ ಮಾರ್ಗಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವುದು, ಡೋನ್ ಮತ್ತು ಸಿಸಿಟಿವಿಗಳ ಮೂಲಕ ನೈಜ ಸಮಯದ ನಿಗಾವಣೆ ಮಾಡಿಕೊಳ್ಳುವುದು.

ಬೃಹತ್ ಸಾರ್ವಜನಿಕ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುವಾಗುವಂತೆ ಜನಸಮೂಹದ ನಿಖರ ನಿಯಂತ್ರಣ ತಂತ್ರಗಾರಿಕೆಗಳು, ಬ್ಯಾರಿಕೇಡ್ ನಿಯೋಜನೆ, ನೈಜ ಸಮಯದ ಮೇಲ್ವಿಚಾರಣೆ ಮತ್ತು ನಿಯಂತ್ರಿತ ಪ್ರವೇಶ ಬಿಂದುಗಳ ಮೂಲಕ ಜನರ ಚಲನವನ್ನು ನಿರಂತರವಾಗಿರುವಂತೆ ನೋಡಿಕೊಳ್ಳುವುದು ಹಾಗೂ ಒಂದೇ ಕಡೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ ಕ್ರಮವಹಿಸುವುದು.

ಜನಸಮೂಹ ನಿರ್ವಹಣೆಗೆ ಸಂಬಂಧಿಸಿದಂತೆ ಈ ಕಚೇರಿಯಿಂದ ಹೊರಡಿಸಿರುವ ಎಸ್‌ಒಪಿ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು. ಎಲ್ಲಾ ಕಾರ್ಯಕ್ರಮ ಆಯೋಜಕರೊಂದಿಗೆ ಪೂರ್ವಭಾವಿ ಸಭೆ ನಡೆಸಿ ನಿರ್ದೇಶನಗಳನ್ನು ನೀಡಿ, ಕಟ್ಟುನಿಟ್ಟಾಗಿ ಜಾರಿಯಾಗುವಂತೆ ನೋಡಿಕೊಳ್ಳುವುದು ಹಾಗೂ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸುವುದು

ಸಿಸಿಟಿವಿ, ಡೋನ್ ಮತ್ತು ನೈಜ ಸಮಯದ ಕ್ರೌಡ್ ಟ್ಯಾಕಿಂಗ್ ವ್ಯವಸ್ಥೆಗಳ ಮೂಲಕ ಜನಸಾಂದ್ರತೆಯ ಮೇಲ್ವಿಚಾರಣೆ, ವರ್ತನೆಯ ಸ್ವರೂಪ ಮತ್ತು ಒತ್ತಡಗಳು ಸಂಭವಿಸುವ ಸಾಧ್ಯತೆಗಳನ್ನು ನಿರ್ಧರಿಸಿ, ಅಗತ್ಯ ಕ್ರಮ ಕೈಗೊಳ್ಳುವುದು.

ಈ ಹಿಂದಿನ ದತ್ತಾಂಶ, ಸಾಮಾಜಿಕ ಮಾಧ್ಯಮ ಮತ್ತು ಜನರ ಹರಿವಿನ ವಿಶ್ಲೇಷಣೆಯ ಮೂಲಕ ಅಪಾಯಗಳನ್ನು ಊಹಿಸಲು ಡೇಟಾ ಅನಾಲಿಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಎ.ಐ) ಬಳಸಿಕೊಳ್ಳುವುದು.

ಜನರನ್ನು ಶಾಂತಗೊಳಿಸಲು ಅಥವಾ ಚಲನವಲನವನ್ನು ಮರುನಿರ್ದೇಶಿಸಲು ಸಾರ್ವಜನಿಕ ಘೋಷಣಾ ವ್ಯವಸ್ಥೆಗಳು (ಪಬ್ಲಿಕ್ ಅಡ್ರಸ್ ಸಿಸ್ಟಂ) ಮತ್ತು ಡಿಜಿಟಲ್ ಡಿಕ್ಷೆ ಗಳನ್ನು ಬಳಸಿ ಮಾಹಿತಿ ಬಿತ್ತರಿಸುವುದು.

ತರಬೇತಿ ಪಡೆದ ಭದ್ರತಾ ಸಿಬ್ಬಂದಿಯನ್ನು ಚೆಕ್‌ ಪೋಸ್ಟ್‌ಗಳಲ್ಲಿ ನಿಯೋಜಿಸಿ, ಲೋಹ ಶೋಧಕಗಳು, ಬ್ಯಾಗ್ ತಪಾಸಣೆ ಮತ್ತು ಟಿಕೆಟ್ ಪರಿಶೀಲನೆಯೊಂದಿಗೆ ಪ್ರವೇಶವನ್ನು ನಿಯಂತ್ರಿಸಿ, ಅಪಾಯಗಳನ್ನು ಪತ್ತೆ ಹಚ್ಚುವ ಕ್ರಮಗಳನ್ನು ಕೈಗೊಳ್ಳುವುದು.

BREAKING: Police Department issues guidelines for New Year celebrations in the state: Compliance with these rules is mandatory!
Share. Facebook Twitter LinkedIn WhatsApp Email

Related Posts

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM1 Min Read

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM1 Min Read

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM1 Min Read
Recent News

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

‘ನೆಹರು ಮಾತು ಕೇಳಿ’ : ಯುದ್ಧದ ಸಮಯದಲ್ಲಿ ಕಾಂಗ್ರೆಸ್ ತಪ್ಪು ಮಾಹಿತಿ ಹರಡುತ್ತಿದೆ ; ಪ್ರಧಾನಿ ಮೋದಿ

13/03/2026 9:30 PM
State News
KARNATAKA

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

By kannadanewsnow0913/03/2026 10:11 PM KARNATAKA 1 Min Read

ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ…

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.