ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಎಂಟ್ರಿ ಆಗಿದ್ದು ಈಗಾಗಲೇ ಬೆಂಗಳೂರಲ್ಲಿ ಒಂದೇ ಕಡೆಗೆ ಸುಮಾರು 71 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಇದೀಗ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊರೋನಾ ತಡೆಗಟ್ಟುವ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೋವಿಡ್ ಹೆಲ್ಪ್ಲೈನ್ ತೆರೆಯಿರಿ. ಕಳೆದ ಬಾರಿ ಆದಂತೆ ಈ ಬಾರಿ ಯಾವುದೇ ಸಮಸ್ಯೆ ಆಗಬಾರದು. ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.