ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಮಂತ್ರಿ ಭೇಟಿ ನೀಡಿ, ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಈ ಒಂದು ಮಂದಿರ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದ್ದು ಚಾಲುಕ್ಯ, ಹೊಯ್ಸಳ, ಚೋಳರು ಹಾಗು ಗಂಗರ ಕಾಲದ ಶಿಲ್ಪ ಕಲೆಗಳ ಸಮಾಗಮವಾಗಿದೆ. ಹತ್ತು ವರ್ಷಗಳ ಹಿಂದೆ ಈ ಒಂದು ಮಂದಿರದ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಶಿಲ್ಪಿ ಶಂಕರ್ ಸ್ತಪತಿಅವರಿಂದ ಮಂದಿರದ ಕೆತ್ತನೆ ಕಾರ್ಯ ನೆರವೇರಿದ್ದು, ಬಾಲಗಂಗಾಧರನಾಥ ಶ್ರೀ ಗದ್ದುಗೆ ಸ್ಥಳದಲ್ಲಿ ಮಂದಿರ ನಿರ್ಮಿಸಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್, ಕೇಂದ್ರ ಸಚಿವರಾದ ಹೆಚ್ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಸಿರಿದಂತೆ ಹಲವು ರಾಜಕೀಯ ಗಣ್ಯರು ಮಠಾಧೀಶರು ಉಪಸ್ಥಿತರಿದ್ದರು.








