ಬೆಂಗಳೂರು : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಶತ್ರು ರಾಷ್ಟ್ರದ ಪ್ರಜೆಗಳ ಆಸ್ತಿ ಪತ್ತೆಯಾಗಿದೆ. ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಇದೀಗ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎನಿಮಿ ಪ್ರಾಪರ್ಟಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಭಾರತದಿಂದ ಪಾಕಿಸ್ತಾನ ಹಾಗೂ ಚೀನಾ ಗೆ ಹೋಗಿ ಅಲ್ಲಿನ ನಾಗರಿಕತ್ವ ಪಡೆದವರ ಆಸ್ತಿ ಕಸ್ಟೋಡಿಯನ್ ಆಫ್ ಎನಿಮಿ ಪ್ರಾಪರ್ಟಿ ಫಾರ್ ಇಂಡಿಯಾ ದಿಂದ ಆಸ್ತಿ ಗುರುತಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾಡಳಿತದಿಂದ ಎನಿಮಿ ಪ್ರಾಪರ್ಟಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರಿ ದರ ಹಾಗೂ ಮಾರುಕಟ್ಟೆ ದರ ನಿಗದಿ ಮಾಡಿದ ಬೆಂಗಳೂರು ಜಿಲ್ಲಾಡಳಿತ.
ಬೆಂಗಳೂರು ನಗರದಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ಪಾಕಿಸ್ತಾನ ಪ್ರಜೆಗಳ ಆಸ್ತಿ ಗುರುತು ಪತ್ತೆ ಮಾಡಿದೆ. ಇದೇ ತಿಂಗಳು ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಹರಾಜಿನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಇದೆ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸರ್ಕಾರದ ಹೆಸರಿಗೆ ಸೇರುಗ ನಿರೀಕ್ಷೆ ಇದೆ.








