ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದವರು ಯಾರು? ಬಿವೈ ವಿಜಯೇಂದ್ರ ಇಂತಹ ಹಲ್ಕಾ ಕೆಲ್ಸ ಯಾರಾದರೂ ಮಾಡುತ್ತಾರಾ? ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ ಕೂಡಿ, ರಮೇಶ್ ಜಾರಕಿಹೊಳಿ ಜೀವನ ಹಾಳು ಮಾಡಿದ್ದಾರೆ. ಬಿಜೆಪಿ ಹಿರಿಯ ನಾಯಕರಿಗೆ ಈಗ ನೆನಪಾಯ್ತಾ? ಎಂದು ಬಿ ವೈ ವಿಜಯೇಂದ್ರ ವಿರುದ್ಧ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ ಮಾಡಿದರು.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬದಲಾವಣೆ ಆಗಬೇಕು. ಬದಲಾವಣೆಯ ಬಗ್ಗೆ ಚರ್ಚೆಗಳು ಬೇಡ ಬದಲಾವಣೆ ಆಗಲಿ. ಬಿವೈ ವಿಜಯೇಂದ್ರನಿಂದ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದೆ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿಗೆ ಬಾರಿ ಹೊಡೆತ ಬಿದ್ದಿದೆ ವಿಜೇಂದ್ರ ಒಳಪಂದಕ್ಕೆ ಬಿಜೆಪಿಗೆ ಹಿನ್ನಡೆಯಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಒಳ ಒಪ್ಪಂದದಿಂದ, ಹೀನಾಯವಾಗಿ ಸೋತಿದ್ದೇವೆ. ಚಾಮರಾಜನಗರ, ತುಮಕೂರು,ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್, ರಾಯಚೂರು, ಕೊಪ್ಪಳ ದಾವಣಗೆರೆ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋತಿದ್ದೇವೆ ಕೊಪ್ಪಳದಲ್ಲಿ ಬಿವೈ ವಿಜಯೇಂದ್ರ ಒಬ್ಬ ಚೀಲ ಇದ್ದಾನೆ ಆತ ರಾಘವೇಂದ್ರ ಹಿಟ್ನಾಳ ಅಣ್ಣ ಆರಿಸಿ ಬರಲಿ ಎಂದು ವಿಜಯೇಂದ್ರ ಜೊತೆಗೆ ಡೀಲ್ ಮಾಡಿಕೊಂಡಿದ್ದಾನೆ.
ಬೀದರ್ ನಲ್ಲಿ ಸಹ ಈಶ್ವರ ಖಂಡ್ರೆ ಕಂಡ್ರೆ ಜೊತೆಗೆ ವಿಜಯೇಂದ್ರ ಚೇಲಾಗಳು ಒಳ ಒಪ್ಪಂದ ಮಾಡಿ ಕೊಂಡಿದ್ದಾರೆ. ಇದುವರೆಗೂ ಈಶ್ವರ್ ಖಂಡ್ರೆ ಅವರ ಮನೆಯಲ್ಲಿ ಇರುತ್ತಾರೆ ಬೆಳಿಗ್ಗೆ ಹೋದರೆ ಹಣೆಗೆ ವಿಭೂತಿಸಿಕೊಂಡು ಕುಳಿತಿರುತ್ತಾರೆ, ಇನ್ನು ದಾವಣಗೆರೆಯಲ್ಲಿ ಒಂದು ಕಡೆ ಜೀವಂತ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರೇ ಬಹಿರಂಗವಾಗಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಬಿವೈ ವಿಜಯೇಂದ್ರ ಬದಲಾವಣೆ ಅವಶ್ಯಕತೆ ಇದೆ ಎಂದು ಕಿಡಿಕಾರಿದರು.