ಬೆಂಗಳೂರು : ಆರ್.ಆರ್. ನಗರ ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಅರೋಪ ಪ್ರಕರಣ ಸಂಬಂಧ ಇದೀಗ ಅಧಿಕಾರಿಗಳು ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ 3000 ಪುಟಗಳ ಚಾರ್ಜ್ ಶೀಟ್ ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಸಲ್ಲಿಸಲಾಗಿದ್ದು, ಚಾರ್ಜ್ ಶೀಟ್ ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರ್ಣ ಕುಮಾಅರ್, ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ.
ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ವಿಡಿಯೋ, ಫೋಟೊ ಮಾಡಿರುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ತಮ್ಮ ಪರ ಕೆಲ್ಸ ಮಾಡುವಂತೆ ಮಾಡಲು ಬ್ಲ್ಯಾಕ್ ಮೇಲ್ ಮಾದಿ ಬೆದರಿಕೆ ಹಾಕುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ವಿಚಾರಣೆಯ ವೇಳೆ 63 ಪ್ರಶ್ನೆಗಳನ್ನು ಮುನಿರತ್ನಗೆ ಕೇಳಲಾಗಿತ್ತು. ಸದ್ಯ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.