ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಈ ಒಂದು ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ದುರಂತಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.
ಹೌದು ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಇದೀಗ ಚುರುಕುಗೊಂಡಿದೆ. ಎಮ್ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಲ್ತುಳಿತದ ದುರಂತದ ಸ್ಥಳದಲ್ಲಿ ಸಿಐಡಿ ತಂಡ ಸ್ಥಳ ಮಹಜರು ನಡೆಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲಿನ ಸಿಸಿ ಕ್ಯಾಮೆರಾ ಹಾಗೂ ದೃಶ್ಯಾವಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಟೇಡಿಯಂನ ಎಲ್ಲಾ ಗೇಟ್ಗಳಲ್ಲಿ ಸಿಐಡಿ ಪರಿಶೀಲನೆ ನಡೆಸಿದೆ. ಸ್ಟೇಡಿಯಂ ಅಧಿಕಾರಿಗಳಿಂದಸಿಐಡಿ ತಂಡ ಮಾಹಿತಿ ಪಡೆದುಕೊಂಡಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿಯಿಂದ ಸ್ಟೇಡಿಯಂ ಸುತ್ತಮುತ್ತಲು ಪರಿಶೀಲನೆ ನಡೆಸಲಾಯಿತು. ದುರಂತ ನಡೆದ ಸ್ಥಳದಲ್ಲಿ ಪರಿಶೀಲಿಸಿ ಸೇಡಿ ತಂಡ ಮತ್ತೆ ತೆರಳಿದೆ.