ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ.
ಹೌದು ತಡ ರಾತ್ರಿ ಬೆಂಗಳೂರಿನ MG ರೋಡ್, ಚರ್ಚ್ಸ್ಟ್ರೀಟ್, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್ಸ್ಟ್ರೀಟ್ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್ಗಳಲ್ಲಿ ಡಿಜೆ ಸಾಂಗ್ಗೆ ಅಭಿಮಾನಿಗಳು ಸಕತ್ ಸ್ಟೆಪ್ ಹಾಕುತ್ತಿದ್ದಾರೆ. ಈ ಸಲ ಕಪ್ ನಮ್ದು, ಜೈ ಆರ್ಸಿಬಿ ಎಂದು ಘೋಷಣೆಗಳನ್ನು ಕೂಗಿದರು.
Congratulations 🎊 #RCB @imVkohli #Bengaluru pic.twitter.com/b8eYmwQNRR
— BH🅰️🅰️i🐉 🐲 (@NareshB07879501) June 3, 2025