ಬೆಂಗಳೂರು : ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಗುಜರಾತಿನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಪಂಜಾಬ್ ವಿರುದ್ಧ 6 ರನ್ ಗಳ ಗೆಲುವು ಸಾಧಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಭಾರಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆಯ ವೇಳೆ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಗಳ ರಾತ್ರಿ ನಡೆದ ಘಟನೆಯಾಗಿದ್ದು, ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಸಂಭ್ರಮಾಚರಣೆ ಮಾಡುತ್ತಾ ಯುವಕ ಬಾರ್ ಗೆ ತೆರಳುತ್ತಿರುವಾಗ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.ಆದರೆ ಚಾಕು ಇರಿತಕ್ಕೆ ಒಳಗಾಗಿರುವ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಯುವಕ ಪ್ರತಿರೋಧ ತೋರಿದ ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳ ಗ್ಯಾಂಗ್ ಪರಾರಿಯಾಗಿದೆ. ತಕ್ಷಣ ಹಲ್ಲೆಗೆ ಒಳಗಾದಂತಹ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.