ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ ಕಾನೂನು ಎಲ್ಲರಿಗೂ ಒಂದೇ ಎಂದು ನಿನ್ನೆಯ ಧರ್ಮಸ್ಥಳ ಗಲಾಟೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.