ಬೆಂಗಳೂರು : ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ವೇಳೆ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇದೀಗ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು ಇದೀಗ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಈಗ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಆಗಲಿದ್ದಾರೆ. ಇದು ಎಷ್ಟೊತ್ತಾದರೂ ಶೀಘ್ರದಲ್ಲಿ ಬೆಂಗಳೂರಿನ ಕೋರ್ಟಿಗೆ ದರ್ಶನ್ ಹಾಜರಾಗಲೇಬೇಕು ಕಳಿಕ ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಶೇಷನ್ ಸ್ಕೋರ್ಟಿಗೆ ತಲುಪಿದ ಕೂಡಲೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ. ಅಲ್ಲದೆ ಶೀಘ್ರವಾಗಿ ಸಾಕ್ಷಿಗಳ ವಿಚಾರಣೆ ನಡೆಸಲು ಆದೇಶ ಹೊರಡಿಸಿತು. ಹೈಕೋರ್ಟ್ ಆದೇಶಗಳ ಲೋಪಾlವನ್ನು ಇದೆ ವೇಳೆ ಸುಪ್ರೀಂ ಕೋರ್ಟ್ ಎತ್ತಿ ತೋರಿಸಿತು. ಆರೋಪಿ ಎಷ್ಟೇ ದೊಡ್ಡವರಿದ್ದರು ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ ಎಂದು ತಿಳಿಸಿದರು.
ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಯಾರು ಚಿಕ್ಕವರಲ್ಲ ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸುಪರಿಡೆಂಟ್ ನನ್ನು ಸಸ್ಪೆಂಡ್ ಮಾಡಬೇಕಿತ್ತು. ಇನ್ನು ಮುಂದೆ ಯಾವುದೇ ಫೋಟೋ ಕೊಂಡು ಬಂದರೆ ಕ್ರಮ ಆರೋಪೀ ಜೈಲಲ್ಲೆ ಕುಳಿತು ಸಿಗರೇಟ್ ಸೇದಿದರೆ ಕ್ರಮ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು.
ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.
ಇಂದು ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಫಿಕ್ಸ್ ಎಂಬಂತಾಗಿದೆ.